Advertisement

22,000 ಮಂದಿಗೆ ಶೇಷವಸ್ತ್ರ ವಿತರಣೆ

09:52 AM Sep 26, 2017 | |

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಸೋಮವಾರ ಲಲಿತಾ ಪಂಚಮಿಯ ಆರಾಧನೆ ನಡೆಯಿತು. ಸುಮಾರು 22,000 ಮಹಿಳಾ ಭಕ್ತರಿಗೆ ಶ್ರೀ ದೇವರ ಶೇಷ ವಸ್ತ್ರದ ವಿತರಣೆ ಮಾಡಲಾಯಿತು.

Advertisement

ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರುಗುತ್ತು, ಮೊಕ್ತೇಸರ ವಾಸು ದೇವ ಆಸ್ರಣ್ಣ, ಅರ್ಚಕ ಹರಿನಾರಾಯಣದಾಸ ಆಸ್ರಣ್ಣ , ಸುಧೀರ್‌ ಶೆಟ್ಟಿ ಕೊಡೆತ್ತೂರು ಗುತ್ತು, ಭೋಜನ ಶಾಲೆಯ ವ್ಯವಸ್ಥಾಪಕ ರಘುನಾಥ ಶೆಟ್ಟಿ, ಯೋಗೀಶ್‌, ಸುರೇಶ್‌ ಶೆಟ್ಟಿ, ವಿಜಯ ಕುಮಾರ್‌ ಶೆಟ್ಟಿ, ಗಣೇಶ್‌ ದೇವಾಡಿಗ ಉಪಸ್ಥಿತರಿದ್ದರು.

ಅಚ್ಚುಕಟ್ಟಿನ ವ್ಯವಸ್ಥೆ
ದೇವಸ್ಥಾನದಲ್ಲಿ ಅನ್ನಪ್ರಸಾದ ಹಾಗೂ ಶ್ರೀ ದೇವರ ಶೇಷ ವಸ್ತ್ರ ಪಡೆಯಲು ಮಹಿಳೆಯರು ಮಧ್ಯಾಹ್ನದಿಂದಲೇ ಕಾಯುತ್ತಿದ್ದರು. ಬಸ್‌ ನಿಲ್ದಾಣ, ಕುದುರು ಪ್ರದೇಶ ಹಾಗೂ ಸೇತುವೆಯ ಮೇಲೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ದೇವಿಯ ದರ್ಶನ ಹಾಗೂ ಅನ್ನಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದದ 300 ಮಂದಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು. ಭದ್ರತಾ ವ್ಯವಸ್ಥೆಗೆ 100 ಪೊಲೀಸರನ್ನು ನಿಯೋಜಿಸಲಾಗಿತ್ತು. 30,000ಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next