Advertisement

ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಜಾಮೀನು ಮಂಜೂರು

10:42 PM Feb 24, 2023 | Team Udayavani |

ಕುಂದಾಪುರ: ಇಲ್ಲಿನ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್‌ ಯಾನೆ ಕಟ್ಟೆ ಭೋಜಣ್ಣ (79) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗಳ ಪೈಕಿ ಒಬ್ಬರಾದ ಎಚ್‌. ಇಸ್ಮಾಯಿಲ್‌ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

Advertisement

ಗೋಪಾಲಕೃಷ್ಣ ರಾವ್‌ ಅವರು ಕಳೆದ ವರ್ಷ ಮೇ 25ರಂದು ಕೋಟೇಶ್ವರ ಸಮೀಪ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರ ಮನೆ ಸಿಟ್‌ಔಟ್‌ನಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಡೆತ್‌ನೋಟ್‌ನಲ್ಲಿ ಹೆಸರಿದ್ದ ಗಣೇಶ್‌ ಶೆಟ್ಟಿಯನ್ನು ಈ ಮೊದಲೇ ಬಂಧಿಸಲಾಗಿದ್ದು, ಪ್ರಕರಣದಲ್ಲಿ ಇನ್ನೊಂದು ಹೆಸರಿದ್ದ ಬ್ರೋಕರ್‌ ಎಚ್‌. ಇಸ್ಮಾಯಿಲ್‌ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಉಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಇಲ್ಲಿನ ಪೊಲೀಸ್‌ ಠಾಣೆಗೆ ಹಾಜರಾಗಿದ್ದು, ಅನಂತರ ಪೊಲೀಸರು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯವಾದಿ ರವಿಕಿರಣ್‌ ಮುರ್ಡೇಶ್ವರ ಅವರು ಆರೋಪಿ ಪರ ಜಾಮೀನಿಗೆ ಅರ್ಜಿ ಹಾಕಿದಾಗ ನ್ಯಾಯಾಧೀಶ ಧನೇಶ ಮುಗಳಿ ಅವರು ಉಚ್ಚ ನ್ಯಾಯಾಲಯದ ಆದೇಶದಂತೆ ಕ್ರಮಬದ್ಧ ಜಾಮೀನು ಮಂಜೂರು ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next