Advertisement

Kerala: 96ನೇ ವಯಸ್ಸಲ್ಲಿ ಅಕ್ಷರ ಕಲಿತ ಕಾತ್ಯಾಯಿನಿ ಅಮ್ಮ ನಿಧನ

08:22 PM Oct 11, 2023 | Team Udayavani |

ತಿರುವನಂತಪುರಂ: ಕೇರಳದ ಸಾಕ್ಷರತಾ ಅಭಿಯಾನದ ಮುಖೇನ ವಿದ್ಯಾಭ್ಯಾಸ ಪಡೆದ ರಾಜ್ಯದ ಅತ್ಯಂತ ಹಿರಿಯ ವಿದ್ಯಾರ್ಥಿನಿ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಕಾತ್ಯಾಯಿನಿ ಅಮ್ಮ ಬುಧವಾರ ಇಹಲೋಕ ತ್ಯಜಿಸಿದ್ದಾರೆ.

Advertisement

ಅಳಪ್ಪುಳ ಜಿಲ್ಲೆಯ ಚೆಪ್ಪಡ್‌ ಗ್ರಾಮದ ನಿವಾಸಿಯಾಗಿದ್ದ ಕಾತ್ಯಾಯಿನಿ ಅಮ್ಮ, ತಮ್ಮ 96ನೇ ವಯಸ್ಸಿನಲ್ಲಿ ಸಾಕ್ಷರತೆ ಅಭಿಯಾನದ “ಅಕ್ಷರಲಕ್ಷಂ’ ಪರೀಕ್ಷೆ ಬರೆದಿದ್ದರಲ್ಲದೆ, ಈ ಪರೀಕ್ಷೆ ಬರೆದಿರುವ ರಾಜ್ಯದ 43,330 ಅಭ್ಯರ್ಥಿಗಳ ಪೈಕಿ ಇವರೇ ಅತ್ಯಂತ ಹಿರಿಯರಾಗಿದ್ದರು. ಜತೆಗೆ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಪ್ರಖ್ಯಾತಿ ಗಳಿಸಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ಸಮಯದಿಂದ ಹಾಸಿಗೆ ಹಿಡಿದಿದ್ದು, ಇದೀಗ ತಮ್ಮ 101ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸಿಎಂ ಪಿಣರಾಯಿ ವಿಜಯನ್‌ ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next