Advertisement

Kaup: ಮಳೆ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ಅಡಚಣೆ

11:49 AM May 30, 2023 | Team Udayavani |

ಕಾಪು: ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಕಾಪು ಶಿಕ್ಷಣ ಸಂಸ್ಥೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗುತ್ತಿದ್ದು, ಅಪಘಾತದ ಭೀತಿಯುಂಟಾಗಿದೆ.

Advertisement

ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿನ ಪರಿಸ್ಥಿತಿ ಇದೇ ಆಗಿದೆ. ಕಾಪುವಿನಲ್ಲಿರುವ ಮಂಗಳೂರು – ಉಡುಪಿ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಯಲ್ಲಿ ಸಂಪೂರ್ಣ ನೀರು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ.

ರಾ. ಹೆ.66 ರ ಚತುಷ್ಪಥ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿಯ ಕೆಲವೆಡೆ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆಯುಂಟಾಗುತ್ತಿದೆ.

ಕಾಪು ಶಾಲೆಯ ಬಳಿಯ ಹೆದ್ದಾರಿಯಲ್ಲಿ ಕಳೆದ ಹಲವು ವರ್ಷಗಳಿಂದ ಇದೇ ರೀತಿಯ ಅಸ್ತವ್ಯಸ್ತವಾಗಿದೆ. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next