ಕಾಪು: ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಕಾಪು ಶಿಕ್ಷಣ ಸಂಸ್ಥೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗುತ್ತಿದ್ದು, ಅಪಘಾತದ ಭೀತಿಯುಂಟಾಗಿದೆ.
ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿನ ಪರಿಸ್ಥಿತಿ ಇದೇ ಆಗಿದೆ. ಕಾಪುವಿನಲ್ಲಿರುವ ಮಂಗಳೂರು – ಉಡುಪಿ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಯಲ್ಲಿ ಸಂಪೂರ್ಣ ನೀರು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ.
ರಾ. ಹೆ.66 ರ ಚತುಷ್ಪಥ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿಯ ಕೆಲವೆಡೆ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆಯುಂಟಾಗುತ್ತಿದೆ.
ಕಾಪು ಶಾಲೆಯ ಬಳಿಯ ಹೆದ್ದಾರಿಯಲ್ಲಿ ಕಳೆದ ಹಲವು ವರ್ಷಗಳಿಂದ ಇದೇ ರೀತಿಯ ಅಸ್ತವ್ಯಸ್ತವಾಗಿದೆ. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Related Articles