Advertisement

kaup ಕಂಚಿನಡ್ಕ ಟೋಲ್ ಕೇಂದ್ರ ರದ್ದು; ನಮ್ಮ ಹೋರಾಟಕ್ಕೆ ಸಂದ ಜಯ ಎಂದ ಕಾಂಗ್ರೆಸ್

05:34 PM Aug 23, 2024 | Team Udayavani |

ಕಾಪು: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್ ಗೇಟ್ ರದ್ದುಪಡಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಶುಕ್ರವಾರ(ಆ23)ಅಧಿಕೃತ ಆದೇಶ ಬಿಡುಗಡೆಯಾಗಿದೆ.

Advertisement

ಟೋಲ್ ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆ.21ರ ಬುಧವಾರ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಸೊರಕೆ ಯವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸಚಿವಸತೀಶ್ ಜಾರಕಿಹೊಳಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸ್ಥಳೀಯ ಸಮಸ್ಯೆಗಳ ಬಗ್ಗೆ ವಿವರಿಸಿತ್ತು.

ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಅಧಿಕೃತವಾಗಿ ಟೋಲ್ ಗೇಟ್ ನಿರ್ಮಾಣ ಕಾರ್ಯ ರದ್ದಾಗಿದೆ ಎಂದು ಆದೇಶ ಪತ್ರವನ್ನು ರವಾನಿಸಿದ್ದಾರೆ .

ಹೋರಾಟಕ್ಕೆ ಸಹಕರಿಸಿ ಬೆಂಬಲಿಸಿದ ಎಲ್ಲಾ ಸಾರ್ವಜನಿಕರಿಗೂ ಸಂಘಸಂಸ್ಥೆಗಳಿಗೂ, ಕಾಂಗ್ರೆಸ್ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ವಿನಯ್ ಕುಮಾರ್ ಸೊರಕೆ ಮತ್ತು ಕಾಪು ಕಾಂಗ್ರೆಸ್ ಪಕ್ಷದ ಮುಖಂಡರು ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next