Advertisement

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಲಿ’

08:00 AM Aug 18, 2017 | Team Udayavani |

ಕಾಪು: ರಾಜ್ಯ ಸರಕಾರ ಸರಕಾರಿ ಬ್ಯಾಂಕ್‌ಗಳಲ್ಲಿದ್ದ ಸುಮಾರು 22 ಲಕ್ಷ ರೈತರ 8,165 ಕೋ. ರೂ. ಸಾಲ ಮನ್ನಾ ಮಾಡಿದೆ. ತಾಕತ್ತಿದ್ದರೆ ರಾಜ್ಯ ಸರಕಾರದ ಈ ದಿಟ್ಟ ನಿಲುವನ್ನು ಕೇಂದ್ರ ಸರಕಾರವೂ ತೆಗೆದುಕೊಳ್ಳಲಿ. ಮತ್ತು ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಲಿ ಎಂದು ಕಾಪು ಶಾಸಕ ವಿನಯಕುಮಾರ್‌ ಸೊರಕೆ ಹೇಳಿದರು.

Advertisement

ಮುದರಂಗಡಿ  ಗ್ರಾಮೀಣ ಕಾಂಗ್ರೆಸ್‌ ಸಮಿತಿಯ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕರ್ತರು ರಾಜ್ಯ ಸರಕಾರದ ಸಾಧನೆಗಳನ್ನು ಪ್ರತೀಯೊಬ್ಬ ಮತದಾರನ ಮನೆ ಮನೆಗೆ ತೆರಳಿ ತಿಳಿಸಬೇಕು. ಆ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರಕಾರದ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು ಎಂದು ಕರೆ ನೀಡಿದರು. ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುದರಂಗಡಿ ಗ್ರಾ. ಪಂ. ಅಧ್ಯಕ್ಷ  ಡೇವಿಡ್‌ ಡಿ’ಸೋಜ, ತಾ. ಪಂ. ಸದಸ್ಯ ಮೈಕಲ್‌ ರಮೇಶ್‌, ಗ್ರಾ. ಪಂ. ಉಪಾಧ್ಯಕ್ಷೆ ಜಯಂತಿ, ಪಕ್ಷದ ಪ್ರಮುಖರಾದ ಬಾಲಚಂದ್ರ ಶೆಟ್ಟಿ , ದೀಪಕ್‌ ಕುಮಾರ್‌ ಎರ್ಮಾಳ್‌, ಸುನಿಲ್‌ ರಾಜ್‌ ಶೆಟ್ಟಿ, ಗ್ಯಾಬ್ರಿಯಲ್‌ ಮಥಾಯಸ್‌, ಫಿಲೋಮಿನಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next