Advertisement

Kaup; ಮೂಳೂರು: ಪಾದಯಾತ್ರೆ ಹೋಗುತ್ತಿದ್ದ ಭಕ್ತರಿಗೆ ಕಾರು ಢಿಕ್ಕಿ; ಮೂವರಿಗೆ ಗಾಯ

09:16 PM Sep 23, 2024 | Team Udayavani |

ಕಾಪು: ಉಡುಪಿ ಶ್ರೀಕೃಷ್ಣ ಮಠದಿಂದ ಕಟೀಲಿಗೆ ಪಾದಯಾತ್ರೆ ಹೊರಟಿದ್ದ ಭಕ್ತರಿಗೆ ಕಾರು ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಮೂಳೂರಿನಲ್ಲಿ ನಡೆದಿದೆ.

Advertisement

ಉಪ್ಪೂರು ನಿವಾಸಿ ಹಿತೇಶ್‌ ಕುಮಾರ್‌ ಮತ್ತು ಅವರ ಸ್ನೇಹಿತರಾದ ಪೆರ್ಡೂರಿನ ವಿಘ್ನೇಶ್‌, ಕೆಮ್ಮಣ್ಣಿನ ಸಂದೀಪ್‌ ಗಾಯಾಳುಗಳು. ಅವರು ಸೋಮವಾರ ಬೆಳಗ್ಗೆ 4 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಯೂನಿಯನ್‌ ಬ್ಯಾಂಕ್‌ ಬಳಿಯ ಉಡುಪಿ-ಮಂಗಳೂರು ಏಕಮುಖ ರಸ್ತೆಯ ಪೂರ್ವ ಅಂಚಿನ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next