Advertisement

ಕಾಪು : ಟಯರ್ ಸ್ಫೋಟಗೊಂಡು ಮರದ ದಿಮ್ಮಿ ಸಾಗಾಟದ ಲಾರಿಗೆ ಬೆಂಕಿ, ತಪ್ಪಿದ ಭಾರೀ ಅವಘಡ

12:14 PM Oct 28, 2022 | Team Udayavani |

ಕಾಪು : ತೀರ್ಥಹಳ್ಳಿಯಿಂದ ಕೇರಳಕ್ಕೆ ಮರದ ತುಂಡು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಬೆಂಕಿ ಹತ್ತಿದ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

Advertisement

ರಾಷ್ಟ್ರೀಯ ಹೆದ್ದಾರಿ ೬೬ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಘಟನೆ ಸಂಂಭವಿಸಿದ್ದು ಟಯರ್ ಸ್ಪೋಟಗೊಂಡು ಮರದ ದಿಮ್ಮಿಗೆ ಬೆಂಕಿ ಹತ್ತಿತ್ತು. ಬೆಂಕಿಯ ಕೆನ್ನಾಲಗೆ ಲಾರಿಯತ್ತ ಚಾಚುತ್ತಿದ್ದಂತೆಯೇ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರು ಪೊಲೀಸ್ ಠಾಣೆಗೆ ಸುದ್ಧಿ ಮುಟ್ಟಿಸಿದ್ದು ಪೊಲೀಸರು ಅಗ್ನಿಶಾಮಕದಳಕ್ಕೆ ಮಾಹಿತಿ ರವಾನಿಸಿದ್ದರು.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬಂದಿಗಳು ಮತ್ತು ಪೊಲೀಸರು ಜೊತೆಗೂಡಿ ಬೆಂಕಿಯನ್ನು ನಂದಿಸಿದ್ದು ಭಾರೀ ಪ್ರಮಾಣದ ಅವಘಡವೊಂದು ತಪ್ಪಿದಂತಾಗಿದೆ. ಘಟನೆಯಿಂದಾಗಿ ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿದ್ದು ಲಾರಿ ಕೂಡಾ ಹಾನಿಗೊಳಗಾಗಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಪತ್ನಿ ಮೇಲೆ ಕಾರು ಹರಿಸಲು ಯತ್ನ: ಮುಂಬೈ ಪೊಲೀಸರಿಂದ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next