Advertisement

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಸವಾರನಿಗೆ ಗಾಯ

08:55 PM Sep 12, 2024 | Team Udayavani |

ಕಾಪು: ಸ್ಕೂಟಿಗೆ ರಿಕ್ಷಾ ಢಿಕ್ಕಿ ಹೊಡೆದು ಸವಾರ ಕೃಷ್ಣ ಪಾಲನ್‌ (48) ಗಾಯಗೊಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ರಾಜೀವ ಭವನದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.

Advertisement

ಅವರು ಪತ್ನಿ ದೀಪಾ ಅವರನ್ನು ಸಹ ಸವಾರರನ್ನಾಗಿ ಕುಳ್ಳಿರಿಸಿಕೊಂಡು ಗೃಹಪ್ರವೇಶ ಕಾರ್ಯಕ್ರಮಕ್ಕೆಂದು ಇನ್ನಂಜೆಗೆ ಹೋಗುತ್ತಿದ್ದಾಗ ಕಾಪುವಿನಿಂದ ಪಾಂಗಾಳದ ಕಡೆಗೆ ಹೋಗುತ್ತಿದ್ದ ರಿಕ್ಷಾದ ಕನ್ನಡಿ ತಾಗಿ ರಸ್ತೆಗೆ ಬಿದ್ದಿದ್ದಾರೆ. ಗಾಯಾಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಾ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next