Advertisement

ಕಾವೇರಿ ನಿರ್ವಹಣಾ ಮಂಡಳಿ: ವಿರೋಧ

09:10 AM Sep 22, 2017 | Team Udayavani |

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಮೊದಲಿನಿಂದಲೂ ಬಿಜೆಪಿ ವಿರೋಧವಿದ್ದು, ಈ ವಿಚಾರದಲ್ಲಿ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಲು ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

Advertisement

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಸುಪ್ರೀಂಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯದ  ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡಳಿ ರಚನೆ ಮಾಡಿದರೆ ರಾಜ್ಯದ ಹಕ್ಕು ಕೈಬಿಟ್ಟಂತಾಗುತ್ತದೆ. ಇದಕ್ಕೆ ಮೊದಲಿನಿಂದಲೂ ನಮ್ಮ ವಿರೋಧವಿದ್ದು, ಈಗಲೂ ಅದೇ ನಿಲುವು ಹೊಂದಿದ್ದೇವೆ. ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಮೌನ: ಮಹದಾಯಿ ವಿಚಾರ ಕುರಿತು ಪ್ರಸ್ತಾಪಿಸಿದ ಅವರು, ನ್ಯಾಯಾಲಯದ ಹೊರಗೆ ವಿವಾದ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕಾಗಿ ದೆಹಲಿಯಲ್ಲಾದರೂ ಮಾತನಾಡುತ್ತೇವೆ, ಇಲ್ಲವೇ ಗೋವಾದಲ್ಲಾದರೂ ಮಾತನಾಡುತ್ತೇವೆ. ಪಕ್ಷದಲ್ಲಿ ಈ ಕುರಿತಂತೆ ಚರ್ಚೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್‌ ಈ ವಿಚಾರದಲ್ಲಿ ಮೌನವಾಗಿರುವುದರಿಂದ ನಾವು ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next