Advertisement

ಕಾವೂರು: ಚೂರಿಯಿಂದ ಇರಿದು ಮಲ್ಲಿ ಲೇಔಟ್ ನಿವಾಸಿಯ ಬರ್ಬರ ಹತ್ಯೆ!

09:48 PM Nov 03, 2020 | sudhir |

ಕಾವೂರು: ಕಾವೂರು ಮಲ್ಲಿ ಲೇಔಟ್ ನಿವಾಸಿಯಾಗಿರುವ ಸುರೇಂದ್ರನ್ (60) ಎಂಬವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ

Advertisement

ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷದಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.

ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದರೆ ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು. ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು , ಆ ಬಳಿಕ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ.

ವ್ಯವಹಾರಕ್ಕೆ ಸಂಬಂಧಿಸಿ ಕೊಲೆ ನಡೆದಿರಬಹುದೇ ಎಂಬುದು ಪೋಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಾಗಿದೆ.

ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next