Advertisement

ಕಾವ್ಯ ಸಾವು: ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

07:50 AM Aug 03, 2017 | Team Udayavani |

ಉಡುಪಿ: ಆಳ್ವಾಸ್‌ ವಿದ್ಯಾರ್ಥಿನಿ, ರಾಷ್ಟ್ರಮಟ್ಟದ ಪ್ರತಿಭಾವಂತ ಕ್ರೀಡಾಪಟು ಕಾವ್ಯ ಅಸಹಜ ಸಾವಿನ ಬಗ್ಗೆ ಹಲವು ಅನುಮಾನಗಳಿದ್ದು, ಸರಿಯಾದ ತನಿಖೆ ನಡೆಸಿ ಈ ಪ್ರಕರಣದ ಹಿಂದಿರುವ ನಿಗೂಢತೆಯನ್ನು ಬಯಲಿಗೆಳೆಯಬೇಕಿದೆ. ಅದಕ್ಕಾಗಿ ಈ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಎಬಿವಿಪಿ ನಾಯಕ ಕೀರ್ತನ್‌ ಆಗ್ರಹಿಸಿದರು.

Advertisement

ಕಾವ್ಯಾ ಅಸಹಜ ಸಾವಿನ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಜಿಲ್ಲಾ ಅಖೀಲ ಭಾರತ ವಿದ್ಯಾರ್ಥಿ (ಎಬಿವಿಪಿ) ಘಟಕದ ವತಿಯಿಂದ ಎಬಿವಿಪಿ ನಗರ ಕಾರ್ಯದರ್ಶಿ ಸುಭೋದ್‌ ರೆಡ್ಡಿ ನೇತೃತ್ವದಲ್ಲಿ ಬುಧವಾರ ಉಡುಪಿಯ ಕ್ಲಾಕ್‌ ಟವರ್‌ ಮುಂಭಾಗ ನಡೆದ ಬೃಹತ್‌ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. 

ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಹಾಸ್ಟೆಲ್‌ನಲ್ಲಿ ನಡೆದ ಈ ಸಾವಿನ ಕುರಿತು ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದು, ಅದಲ್ಲದೆ ಆಕೆಯ ಸಾವಿನ ಬಳಿಕ ಆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಡೆದಕೊಂಡ ರೀತಿ ನೋಡಿದರೆ ಅನೇಕ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಇದರಿಂದ ಉನ್ನತ ಮಟ್ಟದ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ಅವರು ಹೇಳಿದರು. 

ರಾಷ್ಟ್ರಮಟ್ಟದ ಕ್ರೀಡಾಪಟುವಾಗಿರುವ ಕಾವ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೀನಮನಸ್ಸಿನವಳಲ್ಲ. ಹೆತ್ತವರು ಬರುವ ಮೊದಲೇ ಶವವನ್ನು ಯಾಕೆ ಶವಗಾರಕ್ಕೆ ಸಾಗಿಸಿದ್ದು, ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್‌ ವಿರುದ್ಧ ಯಾಕೆ ಕ್ರಮ ತೆಗೆದುಕೊಂಡಿಲ್ಲ. ಈ ಸಾವಿನ ಹಿಂದೆ ಹಲವು ಅನುಮಾನ ಮೂಡಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಆಕೆಯ ಹೆತ್ತವರಿಗೆ ನ್ಯಾಯ ದೊರಕಿಸಿಕೊಡಬೇಕಿದೆ ಎಂದು ಎಬಿವಿಪಿ ನಾಯಕ ರಕ್ಷಿತ್‌ ಭಂಡಾರಿ ಬೆಳಪು ಹೇಳಿದರು.

Advertisement

ಎಬಿವಿಪಿ ನಾಯಕರಾದ ಸಂಧ್ಯಾ, ಸಚಿನ್‌ ಮತ್ತಿತರರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಎಬಿವಿಪಿ ನಾಯಕರಾದ ಮಂಜುನಾಥ್‌, ಪ್ರಸಾದ್‌, ಶ್ರವಣ್‌, ನಿಖೀಲ್‌, ಪ್ರತೀಶ್‌ ಮತ್ತಿತರರು ಉಪಸ್ಥಿತರಿದ್ದರು. 

ಮಣಿಪಾಲದ ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ ಕಾಲೇಜು, ಎಂಪಿಎಂಸಿ ಕಾಲೇಜು, ಉಡುಪಿಯ ಪೂರ್ಣಪ್ರಜ್ಞ ಕಾಲೇಜು, ಕುಂಜಿಬೆಟ್ಟಿನ ಉಪೇಂದ್ರ ಪೈ ಮೆಮೋರಿಯಲ್‌ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು. 

ವಿಡಿಯೋ : ಪ್ರಶಾಂತ್‌ ಪಾದೆ 

ABVP Urges for CBI Probe into Suspicious Death of Alva’s Student>> Read in English

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next