Advertisement

ಉದ್ದಿಮೆ ಉತ್ತೇಜಿಸಲು ಕಿರಣ್‌ ಶಾ ರಾಯಭಾರಿಯನ್ನಾಗಿಸಿ

03:14 PM Mar 10, 2021 | Team Udayavani |

ಚಾಮರಾಜನಗರ: ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಉದ್ದಿಮೆಗಳು ಮತ್ತು ಜೈವಿಕ ತಂತ್ರಜ್ಞಾನ ಉದ್ದಿಮೆಗಳನ್ನು ಸ್ಥಾಪಿಸಲುಸಂಪನ್ಮೂಲ ಲಭ್ಯತೆ ಹೇರಳವಾಗಿರುವು ದರಿಂದ ಅವುಗಳ ಸದುಪಯೋಗಕ್ಕಾಗಿ ಬಯೋಕಾನ್‌ ಅಧ್ಯಕ್ಷ, ಉದ್ಯಮಿ ಕಿರಣ್‌ ಮಜುಂದಾರ್‌ ಶಾ ಅವರನ್ನು ಚಾರಾಜನಗರ ಜಿಲ್ಲಾ ರಾಯಭಾರಿಯಾಗಿ ಆಹ್ವಾನಿಸಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಕೆ.ಬಿ. ಅರಸಪ್ಪ ಆಗ್ರಹಿಸಿದರು.

Advertisement

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಭಾವಿ ಕೈಗಾರಿಕೋದ್ಯಮಿಗಳಿಗೆ ಹಾಗೂ ನವೋದ್ಯಮ ಗಳಿಗಾಗಿ ಪ್ರತಿ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೆಐಎಡಿಬಿ/ಕೆಎಎಸ್‌ ಎಸ್‌ಐಡಿಸಿ ಗಳಿಗೆ ರಾಜ್ಯ ಸರ್ಕಾರ ಸೂಚಿಸಬೇಕು ಎಂದರು. ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿಯಿಂದ ಮೂಗೂರು ಕ್ರಾಸ್‌ ವರೆಗಿನ 12 ಕಿ.ಮೀ. ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಬೇಕು ಎಂದರು.

ಉದ್ಯಮಶೀಲತೆ ತರಬೇತಿಯ ಮೂಲಕ ಗ್ರಾಮೀಣ ಯುವಜನರ ಉದ್ಯಮಶೀಲತಾಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂತರಬೇತಿ ಪಡೆದ ನಂತರ ಉದ್ದಿಮೆಗಳನ್ನುಪ್ರಾರಂಭಿಸಲು ನಿಯಮಗಳನ್ನು ಸಡಿಲಿಸಿ ತ್ವರಿತ ಸಾಲ ವಿತರಣಾ ವ್ಯವಸ್ಥೆಯನ್ನು ರೂಪಿಸಲು ಸೂಕ್ಷ್ಮ ಉದ್ಯಮಗಳಿಗೆ ಮೀಸಲಾದ ಯೋಜನೆಗಳನ್ನು ರಾಜ್ಯ ಸರ್ಕಾರ ಘೋಷಿಸಬೇಕು. ಎಂಎಸ್‌ಎಂಇಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿಅರ್ಥಮಾಡಿಕೊಳ್ಳುವ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಿಲ್ಲೆಗಳು ಮತ್ತು ವಿವಿಧ ಪ್ರದೇಶಗಳಿಗೆ ಕಾಸಿಯಾ ಭೇಟಿ ನೀಡುತ್ತಿದ್ದು, ಅದರ ಭಾಗವಾಗಿ ಚಾ.ನಗರಕ್ಕೂ ಭೇಟಿ ನೀಡಿದ್ದೇವೆ ಎಂದರು.

ಸೂಕ್ಷ್ಮ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಶೇ.4 ರ ಬಡ್ಡಿ ದರದಲ್ಲಿ ಕೆಎಸ್‌ಎಫ್ಸಿ ನೀಡುತ್ತಿರುವ ಸಾಲಗಳು ತುಂಬಾ ಉಪಯುಕ್ತವಾಗಿರುವುದರಿಂದ,ಸಹಾಯಧನ ಅಂತರವನ್ನು ಪೂರೈಸಲುಕೆಎಸ್‌ಎಫ್ಸಿಗೆ ಹೆಚ್ಚುವರಿಯಾಗಿ 300 ಕೋಟಿ ರೂ. ನೀಡಬೇಕು ಎಂದರು.

ಕೈಗಾರಿಕಾ ಪ್ರದೇಶಗಳ ನಿರ್ವಹಣೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಎಂಬ ಪ್ರತ್ಯೇಕ ಸಂಸ್ಥೆಯನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಎಂಎಸ್‌ಎಂಇಗಳಿಗೆ ಹೆಚ್ಚಿನ ಹೊರೆಯಾ ಗಿರುವ ಗಗನಕ್ಕೇರುತ್ತಿರುವ ಪೆಟೊ›àಲ್‌ ಮತ್ತು ಡೀಸೆಲ್‌ ದರ ಇಳಿಸಬೇಕು. ಕೋವಿಡ್‌ -19 ಸಾಂಕ್ರಾಮಿಕವನ್ನು ನಿಭಾಯಿಸಲು ಎಂಎಸ್‌ಎಂಇಗಳಿಗೆ ಅನುವಾಗುವಂತೆ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಸ್ಲಾಬ್‌ ಅನ್ನು ಕಡಿಮೆ ಮಾಡಲು ಕೋರಲಾಗಿದೆ ಎಂದರು.

Advertisement

ಗೋಷ್ಠಿಯಲ್ಲಿ ಕಾಸಿಯಾ ಗೌರವ ಪ್ರಧಾನ ಕಾರ್ಯದರ್ಶಿ ಎನ್‌.ಆರ್‌. ಜಗದೀಶ್‌, ಜಂಟಿ ಕಾರ್ಯದರ್ಶಿ ಪಿ.ಎನ್‌. ಜೈಕುಮಾರ್‌, ಚಾ.ನಗರ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎ.ಜಯಸಿಂಹ, ಗ್ರಾಮೀಣಾಭಿವೃದ್ಧಿ ಅಧ್ಯಕ್ಷ ಸುಬ್ರಹ್ಮಣಿಯನ್‌ ಮತ್ತಿತರರಿದ್ದರು.

 

ಬದನಗುಪ್ಪೆ ಕೈಗಾರಿಕಾ ವಲಯದಲ್ಲಿ ಸೌಲಭ್ಯ ಕಲ್ಪಿಸಿ : ಬದನಗುಪ್ಪೆ ಕೈಗಾರಿಕಾ ವಸಾಹತುಗಳಲ್ಲಿ ನೀರು ಸರಬರಾಜಿನ ಕೊರತೆಯಿಂದಾಗಿ ಕೈಗಾರಿಕೋದ್ಯಮಿಗಳು ತೊಂದರೆಗೀಡಾಗಿದ್ದಾರೆ. ಈ ಸಮಸ್ಯೆ ಬಗೆಹರಿಸಬೇಕು. ಕೈಗಾರಿಕೀಕರಣದಲ್ಲಿ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿರುವುದರಿಂದ, ನೂತನ ಉದ್ದಿಮೆ ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ನೂತನ ಉದ್ದಿಮೆಗಳಿಗೆ 5 ವರ್ಷಗಳ ಕಾಲ ಜಿಎಸ್‌ಟಿ, ಪಿಎಫ್ ಮತ್ತು ಇಎಸ್‌ಐ ಆಸ್ತಿ ತೆರಿಗೆ ಹಾಗೂ ವಿದ್ಯುತ್‌ಬಳಕೆಯ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಬೇಕು.ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕ್ರಿಮಿನಲ್‌ ಚಟುವಟಿಕೆಗಳು ಹೆಚ್ಚಾಗುತ್ತಿದು ತ್ವರಿತವಾಗಿ ಒಂದು ಪೊಲೀಸ್‌ ಠಾಣೆ ತೆರೆಯಬೇಕು. ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಬ್‌-ಸ್ಟೇಷನ್‌ ಕಾರ್ಯಾಚರಣೆ ಆರಂಭಿಸಲು ಸೆಸ್ಕ್ ವಿಳಂಬ ನೀತಿ ಅನುಸರಿಸುತ್ತಿದ್ದು, ತ್ವರಿತವಾಗಿ ಸಬ್‌-ಸ್ಟೇಶನ್‌ ಆರಂಭಿಸುವಂತೆ ಸೆಸ್ಕ್ಗೆ ಆದೇಶಿಸಬೇಕು ಎಂದು ಕಾಸಿಯಾ ಅಧ್ಯಕ್ಷರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next