Advertisement
ಚುನಾವಣೆ ವರ್ಷವಾಗಿರುವುದರಿಂದ ತಿಂಗಳಲ್ಲಿ ಎರಡು ಬಾರಿ ಕೆಪಿಸಿಸಿ ಕಚೇರಿಗೆ ಆಗಮಿಸಿ ನಾಲ್ಕು ವರ್ಷದಲ್ಲಿ ತಮ್ಮ ಇಲಾಖೆಯ ಸಾಧನೆ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡುವಂತೆ ಸೂಚಿಸಿರುವಬೆನ್ನಲ್ಲೇ ವೇಣುಗೋಪಾಲ್ ಸಚಿವರ ಸಭೆ ಕರೆದಿದ್ದು, ಪಕ್ಷದ ಸೂಚನೆಗಳನ್ನು ಪಾಲಿಸದ ಸಚಿವರುಗಳಿಗೆ ಕ್ಲಾಸ್
ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಕುರಿತು ಇದುವರೆಗೂ ಮಾಡಿರುವ ಕೆಲಸಗಳ ಬಗ್ಗೆ ಈಗಾಗಲೇ ಜಿಲ್ಲಾ ಘಟಕಗಳಿಂದ ಮಾಹಿತಿ ತರಿಸಿಕೊಂಡು ವೇಣುಗೋಪಾಲ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಈಗ ಸಚಿವರ ಜೊತೆ ಸಮಾಲೋಚನೆ ಸಂದರ್ಭದಲ್ಲಿ ಅವರು ಪಕ್ಷ ಸಂಘಟನೆಗೆ ಮಾಡಿರುವ ಕಾರ್ಯದ ಕುರಿತು ವಿವರಣೆ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ನಿರ್ವಹಿಸುತ್ತಿದ್ದಾರೆ ಮತ್ತು ಮುಂದಿನ ಚುನಾವಣೆಗೆ ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು
ಗೆಲ್ಲಿಸಿಕೊಂಡು ಬರಲು ಹಾಕಿಕೊಂಡ ಕಾರ್ಯಕ್ರಮಗಳ ಬಗ್ಗೆಯೂ ಸಚಿವರಿಂದ ಮಾಹಿತಿ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಪಕ್ಷದ ಪದಾಧಿಕಾರಿಗಳ ಸಭೆಯನ್ನೂ ಪ್ರತ್ಯೇಕವಾಗಿ ಕರೆದಿರುವ ವೇಣುಗೋಪಾಲ, ಈಗಾಗಲೇ ಉಸ್ತುವಾರಿ ವಹಿಸಿಕೊಂಡಿರುವ ಜಿಲ್ಲೆಗಳಲ್ಲಿ ಭೂತ್ ಮಟ್ಟದ ಸಮಿತಿಗಳ ರಚನೆ ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಮಾಡಿರುವ ಕೆಲಸಗಳ ಬಗ್ಗೆ ವಿವರಣೆ ಪಡೆಯಲಿದ್ದಾರೆ ಎನ್ನಲಾಗಿದೆ.
Related Articles
ಆರ್. ಪಾಟೀಲ್ ಪಾಲ್ಗೊಳ್ಳಲಿದ್ದಾರೆ.
Advertisement