Advertisement

ದೇವೇಗೌಡರನ್ನು ಭೇಟಿಯಾದ ಕೆಸಿಆರ್‌

06:00 AM May 23, 2018 | Team Udayavani |

ಬೆಂಗಳೂರು: ತೆಲಂಗಾಣ ಸಿಎಂ ಕೆ.ಚಂದ್ರಶೇಖರರಾವ್‌ ಮಂಗಳವಾರ ರಾತ್ರಿ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ನಿಯೋಜಿತ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. ಚಂದ್ರಶೇಖರರಾವ್‌ ಬುಧವಾರ ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತಾದರೂ ಕಾರಣಾಂತರಗಳಿಂದ ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ಬೆಂಗಳೂರಿಗೆ
ಆಗಮಿಸಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಚಂದ್ರಶೇಖರರಾವ್‌ ಅರ್ಧ ಗಂಟೆಗೂ ಹೆಚ್ಚು ಕಾಲ ದೇವೇಗೌಡರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು. ಬೆಂಗಳೂರಿನಿಂದ ಮಂಗಳವಾರ
ರಾತ್ರಿಯೇ ಹೈದರಾಬಾದ್‌ಗೆ ವಾಪಸಾಗಿರುವ ಚಂದ್ರಶೇಖರರಾವ್‌ ಪೂರ್ವನಿಗದಿಯಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಮೊದಲೇ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಯದೇ ಕಾರಣ ಹರಿದಾಡುತ್ತಿದೆ. ಕೆಸಿಆರ್‌ಗೆ ಕಾಂಗ್ರೆಸ್‌
ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳಲು ಮನಸ್ಸಿಲ್ಲದ ಹಿನ್ನೆಲೆಯಲ್ಲಿ ಗೈರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next