Advertisement

ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ

08:53 PM Feb 13, 2021 | Team Udayavani |

ಕಾರವಾರ: ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳಡಿಜಿಲ್ಲೆಯಲ್ಲಿ ಕೈಗೆತ್ತಿಕೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಆರ್ಥಿಕ ವರ್ಷದಅಂತ್ಯದೊಳಗೆ ಪೂರ್ಣಗೊಳಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಸೂಚಿಸಿದರು.

Advertisement

ಜಿಪಂ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, 2021ರ ಮಾರ್ಚ್‌ ತಿಂಗಳಿಗೆ2020ರ ಆರ್ಥಿಕ ವರ್ಷ ಅಂತ್ಯವಗಲಿದೆ.ವಿವಿಧ ಯೋಜನೆಗಳ ಕೋಟಿ ಕೋಟಿಅನುದಾನದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನುಕೈಗೆತ್ತಿಕೊಳ್ಳಲಾಗಿದ್ದು, ಈ ಕಾಮಗಾರಿಗಳ ಪ್ರಗತಿ ಕುರಿತು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಜೊತೆಗೆ ಯಾವುದಾದರೂ ಕಾಮಗಾರಿಗಳುಅನುದಾನದ ಕೊರತೆಯಿಂದ ಸ್ಥಗಿತವಾಗಿದ್ದರೆ. ಅಂತಹ ಸಮಸ್ಯೆಗಳನ್ನು ಆದಷ್ಟು ಬೇಗ ನಿವಾರಣೆ ಮಾಡಬೇಕು ಎಂದು ತಿಳಿಸಿದರು.

ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ, ಪಿಡಬ್ಲ್ಯುಡಿ, ಕೆಆರ್‌ಐಡಿಎಲ್‌, ಹೆಸ್ಕಾಂ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇಕಾರಣಕ್ಕೂ ಜಿಲ್ಲೆಯ ಗ್ರಾಮೀಣ ಹಾಗೂನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಬೇಕು ಎಂದರು.

ಕೋವಿಡ್‌ ಹಿನ್ನೆಲೆಯಲ್ಲಿ ಇಷ್ಟುದಿನ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಶಾಲಾ,ಕಾಲೇಜುಗಳು ಇದೀಗ ಮರಳಿಪ್ರಾರಂಭವಾಗಿವೆ. ಜಿಲ್ಲೆಯ ಎಲ್ಲಭಾಗದಿಂದ ಶಿಕ್ಷಣಕ್ಕಾಗಿ ಮಕ್ಕಳು ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಸಂಚರಿಸಬೇಕಿದೆ.

ಹೀಗಾಗಿ ಸಂಬಂಧಿಸಿದ ಎಲ್ಲ ಇಲಾಖೆಅಧಿಕಾರಿಗಳು ಮಕ್ಕಳ ವಿದ್ಯಾಭ್ಯಾಸಕ್ಕೆಪೂರಕ ವಾತಾವರಣ ಕಲ್ಪಿಸಬೇಕಿದೆ. ಈನಿಟ್ಟಿನಲ್ಲಿ ಆರೋಗ್ಯ ಇಲಾಖೆಯವರು ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮ, ಕೆಎಸ್‌ ಆರ್‌ಟಿಸಿ ಸಂಚಾರ ವ್ಯವಸ್ಥೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರು ಊಟ-ವಸತಿಸೇರಿದಂತೆ ವಿವಿಧ ವ್ಯವಸ್ಥೆಗಳ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Advertisement

ಮಿನುಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಈಗಾಗಲೇ ಮನೆಗಳುಮಂಜೂರಾಗಿವೆ. ಆಯ್ಕೆ ಪ್ರಕ್ರಿಯೆಯೂಪೂರ್ಣಗೊಂಡಿದ್ದು, ಈವರೆಗೂ ಮನೆಗಳಹಂಚಿಕೆಯಾಗಿಲ್ಲ. ಹೀಗಾಗಿ ಸಂಬಂಧಿಸಿದಅಧಿಕಾರಿಗಳು ಫಲಾನುಭವಿಗಳಿಗೆ ಮನೆ ಹಂಚುವ ಪ್ರಕ್ರಿಯೆಗೆ ಏನಾದರೂ ತೊಡಕುಗಳಿದ್ದರೆ ಕೂಡಲೇಸರಿಪಡಿಸಿಕೊಂಡು ಆರ್ಥಿಕ ವರ್ಷದ ಅಂತ್ಯದೊಳಗೆ ಮನೆ ಹಂಚಿಕೆಗೆ ಚಾಲನೆ ನೀಡಬೇಕು ಎಂದರು.

ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಅನೇಕ ಯೋಜನೆಗಳಡಿ ರೈತರಿಗೆ ಅನುಕೂಲವಾಗುವಂತ ಕಾರ್ಯ ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೀಜ, ಗೊಬ್ಬರ, ತಾಡಪತ್ರೆವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.ಅಧ್ಯಕ್ಷರ ಪ್ರಶ್ನೆಗೆ ಉತ್ತರಿಸಿದ ಕೃಷಿಅಧಿಕಾರಿ, ಪ್ರಸಕ್ತ ವರ್ಷದಿಂದ ಪ್ರತಿಯೊಬ್ಬರೈತ ಪ್ರತಿ ತಿಂಗಳು ತನ್ನ ಕೃಷಿ ಭೂಮಿಗೆ ಅನುಗುಣವಗಿ 50 ಚೀಲ ಗೊಬ್ಬರಪಡೆಯಬಹುದು ಎಂದು ಕೇಂದ್ರಸರಕಾರ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗೊಬ್ಬರ ವಿತರಿಸಲಾಗುತ್ತಿದೆ.ಅಲ್ಲದೇ ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ತಾಡಪತ್ರೆಗೆ ರೈತರು ಬೇಡಿಕೆ ಸಲ್ಲಿಸಿದ್ದಾರೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ತಾಡಪತ್ರೆ ಮಂಜೂರಾತಿಗೆ ಪತ್ರ ಬರೆಯಲಾಗಿದ್ದು, ಪ್ರಸಕ್ತ ಸಾಲಿನಲ್ಲಿಜಿಲ್ಲೆಯ ಪ್ರತೀ ತಾಲೂಕಿಗೆ 4-5 ನೂರು ತಾಡಪತ್ರೆಗಳು ಮಂಜೂರಾಗಬಹುದು ಎಂದು ತಿಳಿಸಿದರು.

ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಅಧ್ಯಕ್ಷ ಬಸವರಾಜ ದೊಡ್ಮಮನಿ, ಶಿಕ್ಷಣಮತ್ತು ಆರೋಗ್ಯ ಸ್ಥಾಯಿ ಅಧ್ಯಕ್ಷೆ ಚೈತ್ರಾ ಕೋಠಾರಕರ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿಸಮಿತಿ ಅಧ್ಯಕ್ಷೆ ಉಷಾ ನಾಯ್ಕ, ಜಿಪಂಆಡಳಿತ ವಿಭಾಗದ ಉಪಕಾರ್ಯದರ್ಶಿನಾಗೇಶ ರಾಯ್ಕರ್‌ ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next