Advertisement

KEA ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ:ಆರ್‌.ಡಿ.ಪಾಟೀಲ್‌ ಸೇರಿ 12 ಮಂದಿ ವಿರುದ್ಧ ಕೋಕಾಸ್ತ್ರ

01:22 AM Dec 21, 2023 | Team Udayavani |

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಾಗೂ ಪೊಲೀಸ್‌ ಇಲಾಖೆಯ ಪಿಎಸ್‌ಐ, ಕಾನ್‌ಸ್ಟೆàಬಲ್‌ ಸೇರಿ ರಾಜ್ಯ ಸರ್ಕಾರದ ಎಲ್ಲ ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗುತ್ತಿದ್ದ ಆರ್‌.ಡಿ.ಪಾಟೀಲ್‌ ಸೇರಿ 12 ಮಂದಿ ವಿರುದ್ಧ ಸಿಐಡಿ ಕೋಕಾಸ್ತ್ರ ಪ್ರಯೋಗಿಸಿದೆ.

Advertisement

ಇತ್ತೀಚೆಗೆ ಕರ್ನಾಟಕ ಪರೀûಾ ಪ್ರಾಧಿಕಾರ (ಕೆಇಎ)ದ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜ್ಯ ಸರಕಾರದ ಇತರ ಸಂಸ್ಥೆಗಳ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲು ಬ್ಲೂಟೂತ್‌ ನೀಡಿ ಅಕ್ರಮ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲ್‌ ಹಾಗೂ ಆತನ 11 ಮಂದಿ ಸಹಚರರ ವಿರುದ್ಧ ಸಿಐಡಿ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ(ಕೋಕಾ)-2000 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್‌.ಡಿ. ಪಾಟೀಲ್‌ ಹಾಗೂ ಇತರ ವಿರುದ್ಧ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ 8 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಆರ್‌.ಡಿ.ಪಾಟೀಲ್‌, ಇದೇ ರೀತಿಯ ಪರೀûಾ ಅಕ್ರಮಗಳನ್ನು ಈ ಹಿಂದೆ ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿಯೂ ಸಹ ಎಸಗಿದ್ದ. ಕಳೆದ ಅಕ್ಟೋಬರ್‌ನಲ್ಲಿ ಕಲಬುರಗಿಯ ಶಾಲೆಯಲ್ಲಿ ನಡೆದ ಕೆಇಎ ಎಫ್ಡಿಎ ಪರೀಕ್ಷೆಯಲ್ಲಿ ಆರೋಪಿಗಳು, ಅಭ್ಯರ್ಥಿಗಳಿಗೆ ಬ್ಲೂಟೂತ್‌ ನೀಡಿ ಪರೀಕ್ಷೆಗೆ ನೆರವಾಗಿದ್ದರು. ಹೀಗಾಗಿ ಈತ ಮತ್ತು ಈತನ ಸಹಚರರ ವಿರುದ್ಧ ಕಲಬುರಗಿಯ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೇ ಪ್ರಕರಣಕ್ಕೆ ಕೋಕಾ ಕಾಯ್ದೆ ಅಡಿ ಹೆಚ್ಚುವರಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಆರೋಪಿಗಳು ಬಹಳ ವರ್ಷಗಳಿಂದ ಸಂಘಟಿತವಾಗಿ ಒಂದೇ ಮಾದರಿಯ ಅಪರಾಧಗಳಲ್ಲಿ ತೊಡಗಿರುವುದು ಇದುವರೆಗೂ ಸಂಗ್ರಹಿಸಿರುವ ಸಾಕ್ಷಾ ಧಾರಗಳಿಂದ ಪತ್ತೆಯಾಗಿದೆ ಎಂದು ಸಿಐಡಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲ್‌, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿದ್ದ ಸಂತೋಷ್‌ ಕೊಟ್ಟಳ್ಳಿ, ಬ್ಲೂಟೂತ್‌ಗಳನ್ನು ಅಭ್ಯರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ ಶಿವಕುಮಾರ್‌, ಸಾಗರ್‌, ಸರಕಾರಿ ನೌಕರ ರುದ್ರಗೌಡ, ಶಾಲಾ ಕೇಂದ್ರ ಮುಖ್ಯಸ್ಥನಾಗಿದ್ದ ಚಂದ್ರಕಾಂತ್‌ ಬುರಕಲ್‌, ಕಸ್ಟೋಡಿಯನ್‌ ಬಸಣ್ಣ ಪೂಜಾರಿ, ಅಭ್ಯರ್ಥಿಗಳ ಜತೆ ವ್ಯವಹಾರ ಕುದುರಿ ಡೀಲ್‌ ಮಾಡುತ್ತಿದ್ದ ಶಿಶಿಧರ್‌ ಜಮಾದಾರ್‌, ಸಿದ್ರಾಮಾ ಕೋಳಿ, ರವಿಕುಮಾರ್‌, ರಹೀಂಚೌಧರಿ ಮತ್ತು ಬಸವರಾಜ ಎಳವರ ವಿರುದ್ದ ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

Advertisement

ಆರ್‌.ಡಿ. ಪಾಟೀಲ್‌ ಮತ್ತು ತಂಡ ಈ ಹಿಂದೆ 545 ಪಿಎಸ್‌ಐ ಪರೀಕ್ಷೆ ಅಕ್ರಮ, ಲೋಕೋಪಯೋಗಿ ಇಲಾಖೆ ಪರೀಕ್ಷೆಗಳು, ನೀರಾವರಿ ಇಲಾಖೆ ಪರೀಕ್ಷೆಗಳು ಸೇರಿ ಕೆಇಎಯಿಂದ ನಡೆಸಿದ ಎಲ್ಲಾ ಪರೀಕ್ಷೆಗಳಲ್ಲೂ ಅಕ್ರಮ ಎಸಗಿದ್ದರು. ಈ ಹಿಂದೆ ಜಾಮೀನು ನೀಡಿದ್ದ ಕೋರ್ಟ್‌, ಮತ್ತೂಮ್ಮೆ ಇಂತಹ ಪ್ರಕರಣದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿತ್ತು. ಆದರೂ ಆರೋಪಿಗಳು ಅದೇ ಮಾದರಿಯ ಅಕ್ರಮದಲ್ಲಿ ತೊಡಗಿದ್ದಾರೆ. ಹೀಗಾಗಿ ಕೋಕಾ ಕಾಯ್ದೆ ಅಡಿ ಪ್ರಕರಣದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದರು.

ಏನಿದು ಕೋಕಾ ಕಾಯ್ದೆ?

ಗುಂಪು ಕಟ್ಟಿಕೊಂಡು ಸಂಘಟಿತ ರೂಪದಲ್ಲಿ ಪದೇ ಪದೇ ಒಂದೇ ಮಾದರಿಯ ಅಪರಾಧ ಪ್ರಕರಣಗಳಲ್ಲಿ ತೊಡಗಿದ್ದಾರೆ. ಹೀಗಾಗಿ ಎಲ್ಲ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ(ಕೋಕಾ)-2000 ಅಡಿ ಪ್ರಕರಣ ದಾಖಲಿಸಲಾಗಿದೆ. ಅದರಿಂದ ಪೊಲೀಸರಿಗೆ 90 ದಿನಕ್ಕೆ ಸಲ್ಲಿಸುವ ಆರೋಪಪಟ್ಟಿಯನ್ನು 180 ದಿನದೊಳಗೆ ಸಲ್ಲಿಸುವ ಅವಕಾಶ ಸಿಗುತ್ತದೆ. ಜತೆಗೆ ಆರೋಪಿಗಳನ್ನು ಹೆಚ್ಚು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲು ಅವಕಾಶವಿದೆ. ಒಂದು ವೇಳೆ ಆರೋಪ ಸಾಬೀತಾದರೆ ಐದು ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಬಹುದು. ಜತೆಗೆ ಒಂದು ಲಕ್ಷದಿಂದ ಐದು ಲಕ್ಷ ರೂ.ಗೂ ಅಧಿಕ ದಂಡ ವಿಧಿಸುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next