Advertisement

“ವಾಹನದ ಮೂಲ ದಾಖಲೆ ಜತೆಗಿರಿಸಿಕೊಳ್ಳಿ’

09:23 PM Nov 29, 2019 | Team Udayavani |

ಮಹಾನಗರ: ದೇಶಾದ್ಯಂತ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಜಾರಿಗೆ ಬಂದಿದ್ದು, ಪ್ರತಿಯೊಬ್ಬ ವಾಹನ ಸವಾರರು ವಾಹನದ ಮೂಲ ದಾಖಲೆಯನ್ನೇ ಜತೆಗೆ ಇರಿಸಿಕೊಳ್ಳ ಬೇಕು. ಯಾವುದೇ ಕಾರಣಕ್ಕೂ ನಕಲಿ ಪ್ರತಿಗಳನ್ನು ತಪಾಸಣೆ ವೇಳೆ ಪರಿಗಣಿಸಲಾಗುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ| ಹರ್ಷಾ ಪಿ.ಎಸ್‌. ಅವರು ಹೇಳಿದರು.

Advertisement

ಶುಕ್ರವಾರ ತಮ್ಮ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ನಾಗರಿಕರೊಬ್ಬರ ಪ್ರಶ್ನೆಗೆ ಅವರು ಉತ್ತರಿಸಿ ಮಾತನಾಡಿದರು. ವಾಹನ ತಪಾಸಣೆಯ ಸಂದರ್ಭ ಟ್ರಾಫಿಕ್‌ ಪೊಲೀಸರು, ಅಧಿಕಾರಿಗಳು ವಾಹನದ ಮೂಲ ದಾಖಲೆಗಳನ್ನೇ ಕೇಳುತ್ತಿದ್ದಾರೆ. ನಕಲಿ ಪ್ರತಿಗಳನ್ನು ನೀಡಿ ದರೂ ಪರಿಗಣಿಸದೆ ದಂಡ ವಿಧಿಸುತ್ತಾರೆ. ಇದರಿಂದ ವಾಹನ ಸವಾರರಿಗೆ ತೊಂದರೆ ಯಾಗುತ್ತಿದ್ದು, ಮೂಲ ದಾಖಲೆ ಹಾಜರು ಪಡಿಸಲು ಸಮಯ ನೀಡಬೇಕು ಎಂದು ನಗರದ ನಾಗರಿಕರೊಬ್ಬರು ಕರೆ ಮಾಡಿ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಪೊಲೀಸ್‌ ಆಯು ಕ್ತರು, ಮೋಟಾರ ವಾಹನ ತಿದ್ದುಪಡಿ ಕಾಯ್ದೆ ಪ್ರಕಾರ ತಪಾಸಣೆ ವೇಳೆ ಮೂಲ ದಾಖಲೆಯನ್ನೇ ನೀಡಬೇಕು. ನಕಲಿ ಪ್ರತಿಗಳನ್ನು ಪರಿಗಣಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಇದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು ಎಂದರು.

“ಮೈ ಬೀಟ್‌ ಮೈ ಪ್ರೈಡ್‌’ ಗ್ರೂಪ್‌ಗ್ಳಲ್ಲಿ ಸಾಮಾನ್ಯ ಸಂದೇಶ ಹರಿದಾಡುವ ಬದಲು ಜನರಲ್ಲಿ ಜಾಗೃತಿ ಮೂಡಿಸುವ‌ ಸಂದೇಶ ಹಾಕಬೇಕು. ಶಾಂತಿ ಕದಡುವ ಸಂದೇಶ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಸಾರ್ವಜನಿಕರೊಬ್ಬರ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು ನಗರದಲ್ಲಿ “ಮೈ ಬೀಟ್‌ ಮೈ ಪ್ರೈಡ್‌’ ಗ್ರೂಪ್‌ನಲ್ಲಿ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪ್ರಸ್ತುತ 756 ಗ್ರೂಪ್‌ಗ್ಳಿದ್ದು, ಈಗಾಗಲೇ 48,000 ಮಂದಿ ಸದಸ್ಯರಾಗಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀಟ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.

ಕದ್ರಿಯ ನಾಗರಿಕರೊಬ್ಬರು ಕರೆ ಮಾಡಿ ತೇಜಸ್ವಿನಿ ಆಸ್ಪತ್ರೆ- ಕದ್ರಿ ರಸ್ತೆಯ ಎರಡು ಕಡೆಗಳಲ್ಲಿ ವಾಹನ ಪಾರ್ಕಿಂಗ್‌ ಮಾಡುತ್ತಿದ್ದಾರೆ. ಇದರಿಂದ ತೊಂದರೆಯಾಗುತ್ತಿದೆ ಎಂದರು. ಇದಕ್ಕೆ ಉತ್ತರಿಸಿದ ಆಯುಕ್ತರು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Advertisement

ಸ್ಟೇಟ್‌ಬ್ಯಾಂಕ್‌ನಿಂದ ಬಿಕರ್ನಕಟ್ಟೆ ಮುಖೇನ ಪಡೀಲ್‌ಗೆ ಹೋಗುವ ಬಸ್‌ಗಳು ಸಮಯ ಪರಿಪಾಲನೆ ಮಾಡುತ್ತಿಲ್ಲ. ರಾತ್ರಿ 8.30ರ ಬಳಿಕ ಬಸ್‌ ಸಂಚಾರವೇ ಇಲ್ಲ ಎಂದು ಪಡೀಲ್‌ ನಿವಾಸಿಯೊಬ್ಬರು ದೂರಿದರು. ಈ ಬಗ್ಗೆ ಬಸ್‌ ಮಾಲಕರ ಸಂಘದ ಗಮನಕ್ಕೆ ತರಲಾಗುಲುದು ಎಂದು ಆಯುಕ್ತರು ವಿವರಿಸಿದರು.

ಹಿರಿಯ ನಾಗರಿಕರಿಗೆ ತೊಂದರೆ
ನಗರದಲ್ಲಿ ಬಸ್‌ಗಳ ಮೆಟ್ಟಿಲುಗಳು ಎತ್ತರವಾಗಿದ್ದು ಇದರಿಂದ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದರು. ಇದಕ್ಕೆ ಬಸ್‌ ಕೆನರಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಉತ್ತರಿಸಿ ಸಾರಿಗೆ ನಿಯಮ ಪ್ರಕಾರವೇ ಬಸ್‌ಗಳ ಮೆಟ್ಟಿಲು ನಿರ್ಮಿಸಲಾಗುತ್ತಿದೆ. ಮೆಟ್ಟಿಲುಗಳು ತೀರಾ ಕೆಳ ಮಟ್ಟದಲ್ಲಿ ಇದ್ದರೆ ನಗರದ ರಸ್ತೆಗಳಲ್ಲಿ ಕೆಲವು ಬಾರಿ ಹಂಪ್‌ಗ್ಳಿಗೆ ತಗುಲುತ್ತಿವೆ ಎಂದರು.

ನಗರದ ಹಲವೆಡೆ ಸರ್ವಿಸ್‌ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್‌ ಮಾಡುವುದರಿಂದ ತೊಂದರೆಯಾಗುತ್ತಿದೆ ಎಂದು ನಂತೂ ರಿನ ವ್ಯಕ್ತಿಯೊಬ್ಬರು ದೂರಿದರು. ಇದಕ್ಕೆ ಉತ್ತರಿಸಿದ ಆಯುಕ್ತರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಲಾ ಗುವುದು ಎಂದರು.

ಕೊಟ್ಟಾರ ಚೌಕಿಯ ನಿವಾಸಿ ಕರೆ ಮಾಡಿ, ಫ್ಲೈಓವರ್‌ ಕೆಳಗಡೆ ವಾಹನ ಪಾರ್ಕಿಂಗ್‌ಗೆ ಅವಕಾಶ ನೀಡುತ್ತಿಲ್ಲ ಎಂದರು. ಕೊಟ್ಟಾರ ಫ್ಲೈಓವರ್‌ ಕೆಳಗಡೆ ರಾಮಕೃಷ್ಣ ಮಿಷನ್‌ ವತಿಯಿಂದ ಇಂಟರ್‌ಲಾಕ್‌ ಹಾಕಿ ಸೌಂದರೀಕರಣ ಮಾಡಲಾಗಿದ್ದು ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಿಕೊಳ್ಳ ಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿ ವ್ಯವಸ್ಥೆ ಮಾಡಲಾಗುವುದು ಎಂದು ಆಯುಕ್ತರು ತಿಳಿಸಿದರು.

ಇದು 126ನೇ ಫೋನ್‌ ಇನ್‌ ಕಾರ್ಯ ಕ್ರಮ ಆಗಿದ್ದು, ಒಟ್ಟು 14 ಕರೆಗಳು ಬಂದವು.
ಡಿಸಿಪಿಗಳಾದ ಅರುಣಾಂಶುಗಿರಿ, ಲಕ್ಷ್ಮೀಗಣೇಶ್‌, ಎಸಿಪಿ ಮಂಜುನಾಥ ಶೆಟ್ಟಿ, ಟ್ರಾಫಿಕ್‌ ಇನ್‌ಸ್ಪೆಕ್ಟರ್‌ಗಳಾದ ಅಮಾನುಲ್ಲಾ, ಗೋಪಾಲಕೃಷ್ಣ ಭಟ್‌, ಸಬ್‌ ಇನ್‌ಸ್ಪೆಕ್ಟರ್‌ ಸುಕುಮಾರನ್‌, ಸಿಸಿಆರ್‌ಬಿ ಇನ್‌ಸ್ಪೆಕ್ಟರ್‌ ಭಜಂತ್ರಿ, ಎಎಸ್‌ಐ ಬಾಲಕೃಷ್ಣ, ಹೆಡ್‌ಕಾನ್‌ಸ್ಟೆಬಲ್‌ ಪುರುಷೋತ್ತಮ ಉಪಸ್ಥಿತರಿದ್ದರು.

ಜಂಟಿ ಕಾರ್ಯಾಚರಣೆಗೆ ಸಿದ್ಧತೆ
ನಗರದ ಹಲವೆಡೆ ಬೀದಿ ವ್ಯಾಪಾರಿಗಳು ಫುಟ್‌ಪಾತ್‌, ರಸ್ತೆ ಅತಿಕ್ರಮಿಸಿ ವ್ಯಾಪಾರ ಮಾಡುತ್ತಿರುವ ಬಗ್ಗೆ ಫೋನ್‌ ಇನ್‌ ಕಾರ್ಯಕ್ರಮಕ್ಕೆ ದೂರುಗಳು ಬಂದಿದ್ದು, ಇದನ್ನು ಮನಪಾ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಆ ಬಳಿಕ ಜಂಟಿ ಕಾರ್ಯಾಚರಣೆ ನಡೆಸಿ ಅತಿಕ್ರಮಣ ತೆರವು ಮಾಡಲಾಗುವುದು. ಇದಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳ ಸಹಕಾರ ಮುಖ್ಯ ಎಂದು ಆಯುಕ್ತರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next