Advertisement

ಚುನಾವಣಾ ಸುದ್ದಿಗಳ ಮೇಲೆ ನಿಗಾ

01:00 AM Mar 14, 2019 | Team Udayavani |

ಉಡುಪಿ: ಚುನಾವಣ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಮುದ್ರಣ, ಟಿವಿ, ರೇಡಿಯೋ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವಾಗುವ ರಾಜಕೀಯ ಪಕ್ಷಗಳ ಜಾಹೀರಾತು, ಪ್ರಚಾರ ಕಾರ್ಯಕ್ರಮ, ಸುದ್ದಿಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಮೀಡಿಯಾ ಮಾನಿಟರಿಂಗ್‌ ಮತ್ತು ಮೀಡಿಯಾ ಸರ್ಟಿಫಿಕೇಷನ್‌ (ಎಂಸಿಎಂಸಿ) ಕೇಂದ್ರ ತೆರೆಯಲಾಗಿದ್ದು, ಸುದ್ದಿಗಳ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.

Advertisement

ಎಲ್ಲ ಮುದ್ರಣ ಮಾಧ್ಯಮ ಮತ್ತು ಸ್ಥಳೀಯ ಚಾನೆಲ್‌ಗ‌ಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳನ್ನು ವೀಕ್ಷಿಸುವ ಜತೆಗೆ ಸ್ಥಳೀಯ ಕೇಬಲ್‌ ಟಿವಿ ಕಾರ್ಯಕ್ರಮಗಳನ್ನು ಸಂಪೂರ್ಣ ರೆಕಾರ್ಡ್‌ ಮಾಡಲಾಗುತ್ತಿದೆ. 

ಸ್ಥಳೀಯ ಕೇಬಲ್‌ ಚಾನೆಲ್‌ಗ‌ಳಲ್ಲಿ ಜಾಹೀ ರಾತು ನೀಡಲು ಪೂರ್ವಾನುಮತಿ ಅಗತ್ಯ. ಈ ಕೇಂದ್ರದಲ್ಲಿ ಪರಿಶೀಲನೆ ಸಮಯದಲ್ಲಿ ಕಂಡುಬರುವ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಕುರಿತು, ಸಂಬಂಧಪಟ್ಟ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಅವರು ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡುವರು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಯಲು ಈ ತಂಡ ಕಾರ್ಯ ನಿರ್ವಹಿಸುತ್ತಿದೆ. ಅಭ್ಯರ್ಥಿ ಗಳ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ವೆಚ್ಚ ತಂಡಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next