Advertisement

Bail; ಕೇಜ್ರಿವಾಲ್‌ ಬೇಲ್‌ ಭಾಗ್ಯ ಹೇಮಂತ್‌ ಸೊರೇನ್‌ಗಿಲ್ಲ!

12:44 AM May 14, 2024 | Team Udayavani |

ಹೊಸದಿಲ್ಲಿ/ರಾಂಚಿ: ಭೂಕಬಳಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಝಾರ್ಖಂಡ್‌ನ‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರಿಗೆ ಮಧ್ಯಾಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿ, ವಿಚಾರ ಣೆಯನ್ನು 17ಕ್ಕೆ ನಿಗದಿಪಡಿಸಿದೆ. ಹಾಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಜೆಎಂಎಂ ಪರವಾಗಿ ಚುನಾ ವಣೆಯಲ್ಲಿ ಪ್ರಚಾರ ಕೈಗೊಳ್ಳಲು, ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ನೀಡಿದ ರೀತಿಯಲ್ಲಿ ತಮಗೂ ಮಧ್ಯಾಂತರ ಜಾಮೀನು ನೀಡುವಂತೆ ಹೇಮಂತ್‌ ಸೊರೇನ್‌ ಮನವಿ ಮಾಡಿದ್ದರು. ಆದರೆ ನ್ಯಾಯಮೂರ್ತಿ ಸಂಜೀವ್‌ ಖನ್ನಾ, ದೀಪಂಕರ್‌ ದತ್ತಾ ಅವರಿದ್ದ ಪೀಠವು ಮನವಿಯನ್ನು ತಳ್ಳಿ ಹಾಕಿದೆ.

Advertisement

ಕೇಜ್ರಿ ಸಿಎಂ ಸ್ಥಾನದಿಂದ ವಜಾ: ಅರ್ಜಿ ತಿರಸ್ಕರಿಸಿದ ಸುಪ್ರೀಂ
ಹೊಸದಿಲ್ಲಿ: ದಿಲ್ಲಿ ಸಿಎಂ ಸ್ಥಾನದಿಂದ ಅರ ವಿಂದ್‌ ಕೇಜ್ರಿವಾಲ್‌ರನ್ನು ತೆಗೆದುಹಾಕುವಂತೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. ದಿಲ್ಲಿ ಅಬಕಾರಿ ನೀತಿ ಹಗರಣ ಸಂಬಂಧಿ ಸಿದಂತೆ ಕೇಜ್ರಿವಾಲ್‌ ಅವರನ್ನು ಇಡಿ ಬಂಧಿಸಿದ್ದ ಹಿನ್ನೆಲೆಯಲ್ಲಿ ಸಿಎಂ ಸ್ಥಾನದಿಂದ ಕೇಜ್ರಿವಾಲ್‌ರನ್ನು ವಜಾ ಮಾಡಬೇಕು ಎಂದು ದಿಲ್ಲಿ ಹೈಕೋಟ್‌ನìಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಹೈಕೋರ್ಟ್‌ ತಿರಸ್ಕರಿಸಿದ್ದರಿಂದ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅದರ ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿ ವಜಾಗೊಳಿಸಿ, “ಈ ಕುರಿತು ನಾವು ನಿರ್ಣಯ ತೆಗದುಕೊಳ್ಳಲು ಸಾಧ್ಯವಿಲ್ಲ. ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಬೇಕಿದ್ದಲ್ಲಿ ಕ್ರಮ ಕೈಗೊಳ್ಳಬಹುದು’ ಎಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next