Advertisement

ಹೆಚ್ಚಿದ ಬಿಸಿಲ ಝಳ… ಪ್ರವಾಸಿತಾಣ ಕೆಮ್ಮಣ್ಣುಗುಂಡಿ ಪರ್ವತ ಪ್ರದೇಶದಲ್ಲಿ ಕಾಡ್ಗಿಚ್ಚು

06:49 PM Feb 20, 2024 | Team Udayavani |

ಚಿಕ್ಕಮಗಳೂರು: ಜಿಲ್ಲೆಯಲ್ಲಿ‌ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದ್ದಂತೆ ಕಾಡ್ಗಿಚ್ಚು ಪ್ರಕರಣಗಳು ಜಾಸ್ತಿಯಾ ಗುತ್ತಿದೆ. ಇತ್ತೀಚೆಗೆ ಮುಳ್ಳಯ್ಯ ನಗಿರಿ ಸಮೀಪದ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು, ಇದೀಗ ಜಿಲ್ಲೆಯ ತರೀಕೆರೆ ತಾಲೂಕು ಕೆಮ್ಮಣ್ಣುಗುಂಡಿ ಪ್ರವಾಸಿ ತಾಣದಲ್ಲಿನ ಪರ್ವತ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂದಿದೆ.

Advertisement

ಕೆಮ್ಮಣ್ಣುಗುಂಡಿ ಝಡ್ ಪಾಯಿಂಟ್ ಸಮೀಪದ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದು ಕಡೆ ಗಾಳಿ ಮತ್ತು ವಾತಾವರಣದಲ್ಲಿ ಉಷ್ಣಾಂಶ ಜಾಸ್ತಿ ಇರುವುದ ರಿಂದ ಬೆಂಕಿ ನಂದಿಸಲು ತೊಡಕ್ಕಾಗುತ್ತಿದೆ.

ಕೆಮ್ಮಣ್ಣುಗುಂಡಿ ಝಡ್ ಪಾಯಿಂಟ್ ಪ್ರದೇಶ ಭದ್ರ ಹುಲಿ‌ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಬರುತ್ತಿದ್ದು, ಇಲ್ಲಿನ ಶೋಲಾ ಹುಲ್ಲುಗಾವಲು, ಪ್ರಾಣಿ ಪಕ್ಷಿಗಳನ್ನು ಕಾಡ್ಗಿಚ್ಚು ಬಲಿ ಪಡೆದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಅರಣ್ಯ ಪ್ರದೇಶವನ್ನು ಒಳಗೊಂಡಿದ್ದು ಈ ವರ್ಷ ವಾತಾವರಣದಲ್ಲಿನ ಉಷ್ಣಾಂಶ ಏರಿಕೆಯಿಂದ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚು ಆಗುತ್ತಿದ್ದು ಕಾಡ್ಗಿಚ್ಚು ತಡೆಯುವುದು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ತಲೆಬೇನೆ ಯಾಗಿದೆ.

ಇದನ್ನೂ ಓದಿ: Hunasur: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಕೊಲೆ ಶಂಕೆ; ಗ್ರಾಮಸ್ಥರ ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next