Advertisement

ಪಂಚಾಯತ್‌ರಾಜ್‌ ವಿಭಾಗಕ್ಕೆ ಸಲಹೆಗಾರರನ್ನಾಗಿ ಕೆಂಪೇಗೌಡ ನೇಮಕ

06:47 AM Jun 02, 2019 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ನಿವೃತ್ತ ನಿರ್ದೇಶಕ ಎಂ.ಕೆ.ಕೆಂಪೇಗೌಡ ಅವರನ್ನು ಇಲಾಖೆಯ ಪಂಚಾಯತ್‌ ರಾಜ್‌ ವಿಭಾಗದ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

Advertisement

ಸೇವಾ ನಿವೃತ್ತಿ ಬಳಿಕ ಕೆಂಪೇಗೌಡ ಅವರನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು.

ಆದರೆ, ಪಂಚಾಯತ್‌ ರಾಜ್‌ ವಿಷಯದಲ್ಲಿ ಅವರು ಹೆಚ್ಚು ಅನುಭವ ಮತ್ತು ಪರಿಣಿತಿಯನ್ನು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅವರನ್ನು ಹೆಚ್ಚುವರಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪಂಚಾಯತ್‌ ರಾಜ್‌ ವಿಭಾಗಕ್ಕೆ ಸಲಹೆಗಾರರನ್ನಾಗಿ ನೇಮಕ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next