Advertisement

ಕೆಂಪೇಗೌಡ ಜಯಂತಿ ಮುಂದೂಡಿಕೆ ಸಂಭವ

11:31 AM Jul 12, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಮಯಾವಕಾಶ ಲಭ್ಯವಾಗದ ಹಿನ್ನೆಲೆಯಲ್ಲಿ ಬಿಬಿ 
ಎಂಪಿ ಯಿಂದ ಜು.18 ರಂದು ಆಚರಿಸಲು ಉದ್ದೇಶಿಸಿದ್ದ ಕೆಂಪೇಗೌಡ ಜಯಂತಿ ಮುಂದೂಡುವ ಚರ್ಚೆ ನಡೆಯುತ್ತಿದೆ.

Advertisement

ಪ್ರತಿ ವರ್ಷ ಬೆಂಗಳೂರು ಕರಗ ಮಹೋತ್ಸವದ ವೇಳೆ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಪಾಲಿಕೆಯಿಂದ
ಆಚರಿಸಲಾಗುತ್ತದೆ. ಆದರೆ, ನೀತಿ ಸಂಹಿತೆ ಜಾರಿಯಿದ್ದ ಕಾರಣ ಜಯಂತಿ ಮುಂದೂಡಲಾಗಿತ್ತು. ನಂತರದಲ್ಲಿ ಜು.
18ರಂದು ದಿನ ನಿಗದಿಗೊಳಿಸಿ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಮಯ ಕೋರಲಾಗಿತ್ತು. ಅದಕ್ಕೆ
ಮುಖ್ಯಮಂತ್ರಿಗಳು ಅನುಮತಿ ಸಹ ನೀಡಿದ್ದರಿಂದ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಇದೀಗ ಮುಖ್ಯಮಂತ್ರಿಗಳು ಜು. 18ರಂದು ದೆಹಲಿಯಲ್ಲಿ ಸಂಸದರ ಸಭೆಯಲ್ಲಿ ಭಾಗವಹಿಸಬೇಕಿರುವ ಕಾರಣ
ಕೆಂಪೇಗೌಡ ದಿನಾಚರಣೆಗೆ ಬರಲಾಗದು ಎಂದು ಬಿಬಿಎಂಪಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸೂಚನೆ ಬಂದಿದೆ.
ಹೀಗಾಗಿ ಚರ್ಚೆ ನಡೆಯುತ್ತಿದೆ.

ಕೆಂಪೇಗೌಡ ದಿನಾಚರಣೆಯಂದು ಸಂಜೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಖುದ್ದು ಮುಖ್ಯಮಂತ್ರಿಗಳು ಹಾಜರಿದ್ದು, ಪ್ರಶಸ್ತಿ ಪ್ರದಾನ ಮಾಡುವುದು ಪ್ರತೀತಿಯಾಗಿದೆ. ಈ ಬಾರಿಯೂ ಅದನ್ನು ಮುಂದುವರಿಸುವ ಸಲುವಾಗಿ ಮುಖ್ಯಮಂತ್ರಿಗಳು ನೀಡುವ ದಿನದಂದು ಕಾರ್ಯಕ್ರಮ ಆಯೋಜನೆ ಕುರಿತು ನಿರ್ಧರಿಸಲಾಗುತ್ತದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next