Advertisement

ಭಾರಿ ಮಳೆಗೆ ಕುಸಿದ ಕೆಂಗೇರಿ ಮೋರಿ ತಡೆಗೋಡೆ: ನದಿಯಂತಾದ ಮೈಸೂರು ರಸ್ತೆ

02:06 PM Jun 26, 2020 | keerthan |

ಬೆಂಗಳೂರು: ನಗರದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಯ ಕಾರಣದಿಂದ ಕೆಂಗೇರಿ ಮೋರಿ ತಡೆಗೋಡೆ ಕುಸಿದು ರಸ್ತೆಯೆಲ್ಲಾ ನದಿಯಂತಾಗಿದೆ. ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಕೆಂಗೇರಿ ಸಮೀಪ ಟ್ರಾಫಿಕ್ ಜಾಮ್ ಉಂಟಾಗಿದೆ.

Advertisement

ಗುರುವಾರ ರಾತ್ರಿ ಸುರಿದ ಮಳೆಗೆ ವೃಷಭಾವತಿ ನದಿ ಉಕ್ಕಿ ಹರಿದಿತ್ತು. ಕೆಂಗೇರಿಯ ದುಬಾಸಿಪಾಳ್ಯ ಬಳಿ ನದಿಯ ಹರಿವಿನ ರಭಸಕ್ಕೆ ತಡೆಗೋಡೆ ಕೊಚ್ಚಿಹೋಗಿದೆ. ತಡೆಗೋಡೆ ಕೊಚ್ಚಿಹೋದ ಪರಿಣಾಮ ಮೈಸೂರು ರಸ್ತೆಗೆ ನೀರು ಹರಿದಿದ್ದು, ರಸ್ತೆಯ ಒಂದು ಭಾಗ ಕುಸಿತವಾಗಿದೆ.

ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ನೀರಿನ ಹರಿವು ಕಡಿಮೆಯಾಗದೇ ದುರಸ್ಥಿ ಕಾಮಗಾರಿ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ. ರಾತ್ರಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಈಗ ಸಂಚಾರಕ್ಕೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಶರಣಾದ ಕೋವಿಡ್ ಸೋಂಕಿತ ಮಹಿಳೆ

Advertisement

ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಕೆಂಗೇರಿ ಉಪನಗರ ರಸ್ತೆಯ ಮೂಲಕ ಬೆಂಗಳೂರು ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮೈಸೂರಿಗೆ ತೆರಳುವ ವಾಹನಗಳು ನಾಯಂಡಳ್ಳಿ ತಿರುವು ಪಡೆದು ನೈಸ್  ರಸ್ತೆ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next