Advertisement

ಕಾಯಿ ಕೀಳಲು ತೆಂಗಿನ ಮರ ಹತ್ತಿದ ವ್ಯಕ್ತಿಗೆ ಹೃದಯಾಘಾತ, ಮರದಲ್ಲೇ ಕೊನೆಯುಸಿರು !

10:44 PM Feb 06, 2023 | Team Udayavani |

ಕೆಂಗೇರಿ: ತೆಂಗಿನಕಾಯಿ ಕೀಳಲು ತೆಂಗಿನ ಮರ ಏರಿದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮರದ ಮೇಲೆಯೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

Advertisement

ಮೈಲಸಂದ್ರ ನಿವಾಸಿ ನಾರಾಯಣಪ್ಪ (60) ಮೃತಪಟ್ಟವರು. ಬೆಳಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದೆ. ಮೈಲಸಂದ್ರದ ವಿಜಯಶ್ರೀ ಲೇಔಟ್‌ನಲ್ಲಿರುವ ವೆಂಕಟರಣ ದೇವಸ್ಥಾನ ಸಮೀಪದಲ್ಲಿ ಸುಮಾರು 50 ಅಡಿ ಎತ್ತರದ ತೆಂಗಿನ ಮರವಿದೆ. ಪ್ರತಿ ಬಾರಿಯೂ ನಾರಾಯಣಪ್ಪ ಅವರೇ ಈ ಮರದಲ್ಲಿ ಕಾಯಿ ಕೀಳುತ್ತಿದ್ದರು. ಸೋಮವಾರ ಬೆಳಗ್ಗೆ ಕೂಡ ಮರ ಹತ್ತಿದ್ದಾರೆ.

ಈ ವೇಳೆ ಅಲ್ಲಿಯೇ ಹೃದಯಾಘಾತವಾಗಿದೆ. ಬಹಳ ಹೊತ್ತಾದರೂ ಕೆಳಗೆ ಬಂದಿಲ್ಲ. ಫೋನ್‌ ಮಾಡಿದರೂ, ಕೂಗಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಅನಂತರ ಅಗ್ನಿಶಾಮಕ ಸಿಬ್ಬಂದಿ ಕ್ರೇನ್‌ ಮೂಲಕ ತೆಂಗಿನ ಮರದ ಮೇಲೆ ಕುಳಿತಿದ್ದ ನಾರಾಯಣಪ್ಪರನ್ನು ಕೆಳಗಿಳಿಸಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು. ಘಟನೆ ಸಂಬಂಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆ?: ಪೇಜಾವರ ಶ್ರೀ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next