Advertisement

ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು

11:22 PM Jun 30, 2022 | Team Udayavani |

ಕೊಲ್ಲೂರು : ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಜೂ. 29ರಂದು ಮೃತಪಟ್ಟಿದ್ದಾರೆ.

Advertisement

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಳೇಅರಳೀಪುರ ಮೂಲದ, ಪ್ರಸ್ತುತ ವಂಡ್ಸೆಯಲ್ಲಿ ವಾಸವಾಗಿರುವ ಕಾಂತರಾಜು (40) ಮೃತರು.

ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಬಾಡಿಗೆ ಟ್ರ್ಯಾಕ್ಟರ್‌ ಚಾಲಕನಾದ ಕಾಂತರಾಜು ಗದ್ದೆ ಉಳುಮೆ ಮಾಡಿ ಟ್ರ್ಯಾಕ್ಟರ್‌ನಿಂದ ಕೆಳಗಿಳಿದು ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ತತ್‌ಕ್ಷಣ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಪರೀಕ್ಷಿಸಿ ಕಾಂತರಾಜು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.

ಇದನ್ನೂ ಓದಿ :  ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಟೆಂಪೋ: ಚಾಲಕ ಸಾವು

Advertisement

Udayavani is now on Telegram. Click here to join our channel and stay updated with the latest news.

Next