Advertisement

Kerala: ರಾಜೀವ್‌ ಚಂದ್ರಶೇಖರ್‌ ವಿರುದ್ಧ ಮತ್ತೂಂದು ಕೇಸು

08:28 PM Nov 02, 2023 | Pranav MS |

ತಿರುವನಂತಪುರ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಿರುದ್ಧ ಕೇರಳದಲ್ಲಿ ಮತ್ತೂಂದು ಪ್ರಕರಣ ದಾಖಲಿಸಲಾಗಿದೆ. ಕೊಚ್ಚಿಯ ಕನ್ವೆನ್ಷನ್‌ ಸೆಂಟರ್‌ನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಜಲತಾಣಗಳಲ್ಲಿ ಪ್ರಚೋದನಾಕಾರಿಯಾಗಿ ಬರೆದುಕೊಂಡಿದ್ದಾರೆ ಎಂಬ ಮತ್ತೂಂದು ಆರೋಪದ ಮೇರೆಗೆ ಎರ್ನಾಕುಳಂ ಸೆಂಟ್ರಲ್‌ ಪೊಲೀಸರು ಕೇಸು ದಾಖಲಿಸಿದ್ದಾರೆ.

Advertisement

ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಡಿಜಿಟಲ್‌ ಮೀಡಿಯಾ ಸಂಚಾಲಕ ಪಿ.ಸರೀನ್‌ ಅವರು ನೀಡಿರುವ ದೂರನ್ನು ಆಧರಿಸಿ ಈ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ವಕ್ತಾರರಾದ ಅನಿಲ್‌ ಆ್ಯಂಟೋನಿ ಅವರ ವಿರುದ್ಧವೂ ದೂರು ಸಲ್ಲಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next