Advertisement

Kerala;ವಿದೇಶಾಂಗ ಕಾರ್ಯದರ್ಶಿ ನೇಮಕ: ಕೇಂದ್ರ ಸರಕಾರ ಆಕ್ಷೇಪ

12:27 AM Jul 26, 2024 | Team Udayavani |

ಹೊಸದಿಲ್ಲಿ: ಕೇರಳ ಸರಕಾರ ವಿದೇಶಾಂಗ ಕಾರ್ಯದರ್ಶಿ ಸ್ಥಾನ ಸೃಷ್ಟಿಸಿ, ಅದಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಕೆ.ವಾಸುಕಿ ಅವರನ್ನು ನೇಮಿಸಿದ್ದಕ್ಕೆ ವಿದೇಶಾಂಗ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಬೀರ್‌ ಜೈಸ್ವಾಲ್‌ ರಾಜ್ಯ ಸರಕಾರಗಳು ತಮ್ಮ ವ್ಯಾಪ್ತಿಗೆ ಮೀರಿರುವ ನೇಮಕ ಮಾಡಬಾರದು. ಇತರ ರಾಷ್ಟ್ರಗಳ ಜತೆಗೆ ಬಾಂಧವ್ಯ ವೃದ್ಧಿ ಸೇರಿ ಹಲವು ವಿಚಾರಗಳು ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿ ಬರುತ್ತವೆ. ಸಮಪಟ್ಟಿಯಲ್ಲೂ ಈ ವಿಚಾರವಿಲ್ಲ. ಹೀಗಾಗಿ ರಾಜ್ಯ ಸರಕಾರಗಳು ಇಂಥ ನೇಮಕ ಮಾಡುವ ಕ್ರಮ ಕೈಗೊಳ್ಳಬಾರದು ಎಂದರು ಜೈಸ್ವಾಲ್‌.

Advertisement
Advertisement

Udayavani is now on Telegram. Click here to join our channel and stay updated with the latest news.

Next