Advertisement

ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲರಿಗೆ ಮುಕ್ತಿ: ವಿಧೇಯಕಕ್ಕೆ ಒಪ್ಪಿಗೆ

09:40 PM Dec 13, 2022 | Team Udayavani |

ತಿರುವನಂತಪುರ: ವಿವಿಗಳ ಕುಲಾಧಿಪತಿ ಸ್ಥಾನದಿಂದ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರನ್ನು ಮುಕ್ತಗೊಳಿಸುವ ವಿಧೇಯಕಕ್ಕೆ ಕೇರಳ ವಿಧಾನಸಭೆ ಮಂಗಳವಾರ ಅನುಮೋದನೆ ನೀಡಿದೆ. ಅವರ ಸ್ಥಾನದಲ್ಲಿ ಶಿಕ್ಷಣ ಕ್ಷೇತ್ರದ ತಜ್ಞರನ್ನು ನೇಮಕ ಮಾಡಲು ಸರ್ಕಾರಕ್ಕೆ ಅಧಿಕಾರ ನೀಡುವ ಅಂಶ ವಿಧೇಯಕದಲ್ಲಿದೆ. ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷ ಯುಡಿಎಫ್ ಶಾಸಕರು ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ, ಸದನದಲ್ಲಿ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಕೋಲಾಹಲ ಎಬ್ಬಿಸಿದ್ದಾರೆ.

Advertisement

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಕೇರಳ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳನ್ನು ಕುಲಾಧಿಪತಿ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಯುಡಿಎಫ್ ಸಲಹೆ ಮಾಡಿದೆ.

ಜತೆಗೆ ಪ್ರತಿ ವಿವಿಗೂ ಕುಲಪತಿ ಹುದ್ದೆಯೇ ಬೇಡ. ಆಯ್ಕೆ ಸಮಿತಿಯಲ್ಲಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇರಲಿ ಎಂದು ಸಲಹೆ ಮಾಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next