Advertisement

Rain: ಭಾರೀ ಮಳೆಗೆ ಕೇರಳ ತತ್ತರ!- 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

08:46 PM Oct 15, 2023 | Team Udayavani |

ತಿರುವನಂತಪುರಂ: ಕಳೆದೆರಡು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ, ಭೂ ಕುಸಿತದ ಘಟನೆಗಳು ವರದಿಯಾಗಿವೆ. ಏತನ್ಮಧ್ಯೆ, ಭಾನುವಾರ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಜತೆಗೆ ಮುಂದಿನ 2 ದಿನಗಳು ಕೂಡ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

Advertisement

\ತಮಿಳುನಾಡಿನ ಹಲೆವಡೆ ಕೂಡ ಮಳೆಯ ಆರ್ಭಟ ಹೆಚ್ಚಿದ್ದು, ಕೇರಳದ ರಾಜಧಾನಿ ತಿರುವನಂತಪುರದಲ್ಲಂತೂ ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ, ಜಿಲ್ಲೆಯ ಉಪನಗರ ಕಳಕೂಟಂನ ಟೆಕ್ನೋಪಾರ್ಕ್‌ ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ತಿರುವನಂತಪುರ ಜಿಲ್ಲೆಯೊಂದರಲ್ಲೇ 17 ನಿರಾಶ್ರಿತ ಶಿಬಿರಗಳನ್ನು ತೆರೆದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿರುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next