Advertisement
ಆದರೆ ಕೇರಳದಲ್ಲಿ ವರದಿಯಾಗಿರುವ ಘಟನೆಯೊಂದರಲ್ಲಿ ತಪಾಸಣೆಗಾಗಿ ಬೈಕ್ ನಿಲ್ಲಿಸಲಿಲ್ಲ ಎಂದು ಸಿಟ್ಟುಗೊಂಡ ಪೊಲೀಸ್ ಸಿಬ್ಬಂದಿ ತನ್ನ ಕೈಯಲ್ಲಿದ್ದ ಲಾಠಿಯನ್ನು ಬೈಕ್ ಚಲಾಯಿಸುತ್ತಿದ್ದ ಯುವಕನ ಮೆಲೆ ಎಸೆದ ಪರಿಣಾಮ ಯುವಕನ ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರಿಗೆ ಅಪ್ಪಳಿಸಿ ಆ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಸಿದ್ದಿಕ್ ಅವರ ತಲೆಭಾಗಕ್ಕೆ ತೀವ್ರ ಪೆಟ್ಟಾಗಿದೆ ಮಾತ್ರವಲ್ಲದೇ ಬಲ ಕಾಲಿಗೂ ಏಟುಬಿದ್ದಿದೆ. ಘಟನೆ ನಡೆದ ಬಳಿಕ ಪೊಲೀಸರು ಆ ಯುವಕನನ್ನು ಸಮೀಪದಲ್ಲಿದ್ದ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಹೋಗಿದ್ದಾರೆ, ಘಟನೆಯ ಕುರಿತಾದಂತೆ ಮನೆಯವರಿಗೆ ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ ಎಂದು ಯುವಕನ ತಂದೆ ಪೊಲೀಸರ ನಿರ್ಲಕ್ಷ್ಯತನವನ್ನು ಆರೋಪಿಸಿದ್ದಾರೆ. ಪೊಲೀಸರ ವರ್ತನೆಯನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇದಾದ ಬಳಿಕ ಕೇರಳ ಡಿಜಿಪಿ ಲೋಕನಾಥ್ ಬೆಹ್ರಾ ಅವರು ಈ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿ ಮೇಲೆ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸುವಂತೆ ಕೊಲ್ಲಂ ಎಸ್.ಪಿ.ಯವರಿಗೆ ಸೂಚನೆಯನ್ನು ನೀಡಿದ್ದಾರೆ. ಮತ್ತು ಘಟನೆ ಕುರಿತಾದಂತೆ ಡಿ.ಎಸ್.ಪಿ. ಶ್ರೇಣಿಯ ಇಬ್ಬರು ಅಧಿಕಾರಿಗಳಿಂದ ತನಿಖೆ ನಡೆಸಲಾಗುವುದು ಎಂದು ಸಹ ಬೆಹ್ರಾ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
Related Articles
Advertisement