Advertisement

ಬಿಜೆಪಿ ಮುಖಂಡ ಸುರೇಂದ್ರನ್‌ ವಿಚಾರಣೆ

08:34 PM Sep 16, 2021 | Team Udayavani |

ಕಾಸರಗೋಡು:ಕೇರಳದ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಗುರುವಾರ ಕಾಸರಗೋಡಿನಲ್ಲಿ ಕ್ರೈಂ ಬ್ರ್ಯಾಂಚ್‌ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

Advertisement

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆ ವೇಳೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಪಿ ಅಭ್ಯರ್ಥಿಯಾಗಿದ್ದ ಸುಂದರ ನಾಮಪತ್ರ ವಾಪಸ್‌ ಪಡೆಯುವಂತೆ ಹಣ ನೀಡಿ, ಬೆದರಿಕೆ ಹಾಕಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಸಲಾಗಿದೆ.

ಒಂದು ಗಂಟೆ ವಿಚಾರಣೆ ಬಳಿಕ ಮಾತನಾಡಿದ ಸುರೇಂದ್ರನ್‌ ತಮ್ಮ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತವಾದದ್ದು. ತನಿಖೆಯಲ್ಲಿ ಸಹಕಾರ ನೀಡುತ್ತಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ವಿದ್ಯಾರ್ಥಿಗಳ ಬೇಡಿಕೆಗೆ ಸಿಎಂ ಸ್ಪಂದನೆ : ಮಕ್ಕಳ ಜೊತೆ ಬೊಮ್ಮಾಯಿ ಫೋಟೋ

Advertisement

Udayavani is now on Telegram. Click here to join our channel and stay updated with the latest news.

Next