Advertisement

ವರದಕ್ಷಿಣೆ ಕಿರುಕುಳ: ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ-ಪತಿ ಅಪರಾಧಿ: ಕೇರಳ ಕೋರ್ಟ್

04:22 PM May 23, 2022 | Team Udayavani |

ಕೊಲ್ಲಂ(ಕೇರಳ): ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದು, ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಎಸ್.ಕಿರಣ್ ಕುಮಾರ್ ಅಪರಾಧಿ ಎಂದು ಕೇರಳ ಕೋರ್ಟ್ ಸೋಮವಾರ (ಮೇ 23) ತೀರ್ಪು ನೀಡಿದೆ.

Advertisement

ಇದನ್ನೂ ಓದಿ:ಶಿವಮೊಗ್ಗ: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಕ್ಷಿಣೆ ನಿಷೇಧ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂನಡಿ ವಿಸ್ಮಯ ಪತಿಯನ್ನು ಅಪರಾಧಿ ಎಂಬುದಾಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸುಜೀತ್ ಕೆಎನ್ ತೀರ್ಪು ನೀಡಿರುವುದಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ.ಮೋಹನ್ ರಾಜ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ಮತ್ತು ಅಪರಾಧಿ ಪರ ವಾದ, ಪ್ರತಿವಾದ ಆಲಿಸಿದ ನಂತರ ಮಂಗಳವಾರ (ಮೇ 24) ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೋಹನ್ ರಾಜ್ ಹೇಳಿದರು. ಅಪರಾಧಿ ಕಿರಣ್ ಕುಮಾರ್ ಗೆ ಗರಿಷ್ಠ ಪ್ರಮಾಣದ ಶಿಕ್ಷೆಯನ್ನು ವಿಧಿಸಬೇಕೆಂದು ಪ್ರಾಸಿಕ್ಯೂಷನ್ ವಾದ ಮಂಡಿಸಲಿದೆ ಎಂದು ತಿಳಿಸಿದ್ದಾರೆ.

ಇದೊಂದು ಸಾಮಾಜಿಕ ಅನಿಷ್ಟದ ವಿರುದ್ಧದ ತೀರ್ಪು, ಕೇವಲ ಒಬ್ಬ ವ್ಯಕ್ತಿಯ ವಿರುದ್ಧವಲ್ಲ ಎಂದು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ವರದಕ್ಷಿಣೆ ಸಾವಿನ ಪ್ರಕರಣದಲ್ಲಿ ಕನಿಷ್ಠ ಏಳು ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ ಎಂದು  ಹೇಳಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next