Advertisement

ಶಬರಿಮಲೆಗೆ ತೆರಳುವ ಮಕ್ಕಳಿಗೆ ಆರ್‌ಟಿ-ಪಿಸಿಆರ್ ವರದಿ ಕಡ್ಡಾಯವಲ್ಲ : ಕೇರಳ ಸರಕಾರ

03:49 PM Nov 27, 2021 | Team Udayavani |

ತಿರುವನಂತಪುರಂ: ಇನ್ನು ಮುಂದೆ ಶಬರಿಮಲೆ ಯಾತ್ರೆಯಲ್ಲಿ ಮಕ್ಕಳು ಪಾಲ್ಗೊಳ್ಳಲು ಆರ್‌ಟಿ-ಪಿಸಿಆರ್ ಪರೀಕ್ಷೆ ಅನಿವಾರ್ಯವಲ್ಲ ಎಂದು ಕೇರಳ ಸರ್ಕಾರ ಹೇಳಿದೆ.

Advertisement

ನವೆಂಬರ್ 26 ರಂದು ಹೊಸ ಆದೇಶ ಹೊರಡಿಸಿದ್ದು ಈ ಆದೇಶದ ಪ್ರಕಾರ, ಮಕ್ಕಳಿಗೆ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯವಿಲ್ಲ ಎಂದು ಹೇಳಿದ್ದು ಜೊತೆಗೆ ಪೋಷಕರು ಸ್ಯಾನಿಟೈಜರ್‌ಗಳು ಮತ್ತು ಮಾಸ್ಕ್ ಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕವಾಗಿದೆ. ಅಲ್ಲದೆ ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳು 72 ಗಂಟೆಗಳ ಒಳಗೆ ಎರಡು ಡೋಸ್ ವ್ಯಾಕ್ಸಿನೇಷನ್ ಪಡೆದಿರುವ ಪ್ರಮಾಣಪತ್ರ ಅಥವಾ ಆರ್‌ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಸರಕಾರ ಸ್ಪಷ್ಟಪಡಿಸಿದೆ.

ಮಕ್ಕಳೊಂದಿಗೆ ಪೋಷಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಅಲ್ಲದೆ ತಮ್ಮ ಜೊತೆಗಿರುವ ಮಕ್ಕಳ ಆರೋಗ್ಯದ ಜವಾಬ್ದಾರಿಯೂ ಪೋಷಕರ ಮೇಲಿದೆ ಎಂದು ಆದೇಶ ನೀಡಿದೆ.

ಇದನ್ನೂ ಓದಿ : ತೀರ್ಥಹಳ್ಳಿ: ಸರ್ಕಾರಿ ರಜೆಯಲ್ಲಿ ಹಂಚು ಸಾಗಾಟ; ಅಧಿಕಾರಿಗಳು ಗಮನಿಸಲಿ!

Advertisement

Udayavani is now on Telegram. Click here to join our channel and stay updated with the latest news.

Next