Advertisement

ಕೇರಳ ಮಹಾಮಳೆ, ಪ್ರವಾಹ ರುದ್ರನರ್ತನ; ಸಾವಿನ ಸಂಖ್ಯೆ 167ಕ್ಕೆ ಏರಿಕೆ

01:54 PM Aug 17, 2018 | Sharanya Alva |

ತಿರುವನಂತಪುರಂ:ಶತಮಾನದ ಮಹಾಮಳೆಗೆ ದೇವರ ನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 167ಕ್ಕೆ ಏರಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ದೂರವಾಣಿ ಕರೆ ಮಾಡಿ ಸಂಜೆ ಮಳೆ ಮತ್ತು ಪ್ರವಾಹ ಪರಿಸ್ಥಿತಿ ವೀಕ್ಷಣೆಗಾಗಿ ರಾಜ್ಯಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ.

Advertisement

ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ಪಿಣರಾಯಿ ಜೊತೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೂಡಾ ಮಾಹಿತಿ ಪಡೆದಿರುವುದಾಗಿ ವರದಿ ವಿವರಿಸಿದೆ. ಮಳೆಯ ಪ್ರಮಾಣ ಶುಕ್ರವಾರ ಸ್ವಲ್ಪ ಇಳಿಮುಖವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ ಮುನ್ಸೂಚನೆ ನೀಡಿತ್ತು.

ತ್ರಿಶ್ಶೂರ್, ಅಲೂವಾ ಹಾಗೂ ಮೂವಾಟ್ಟುಫುಝಾದಲ್ಲಿ ಪ್ರವಾಹಕ್ಕೆ ಸಿಲುಕಿರುವ ಮನೆಯ ಮೇಲೆ ಜನರು ಕುಳಿತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಭಾರತೀಯ ನೌಕಾದಳದ ಸಿಬ್ಬಂದಿಗಳು ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಜನರ ರಕ್ಷಣೆಗೆ ಇನ್ನಷ್ಟು ನೆರವಿನ ಅಗತ್ಯವಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ಮೋದಿ ಅವರಲ್ಲಿ ವಿನಂತಿಸಿಕೊಂಡಿದ್ದಾರೆ. ಇನ್ನಷ್ಟು ಹೆಚ್ಚಿನ ಹೆಲಿಕಾಪ್ಟರ್ ಹಾಗೂ ಹೆಚ್ಚುವರಿ ಯೋಧರ ಅಗತ್ಯವಿದೆ ಎಂದು ಪಿಣರಾಯಿ ಮನವಿ ಮಾಡಿಕೊಂಡಿದ್ದಾರೆ. ಕೇರಳದ ಇತಿಹಾಸದಲ್ಲಿಯೇ ಮೊದಲ ಬಾರಿಗೆ 39 ಡ್ಯಾಂಗಳ ಪೈಕಿ 35 ಡ್ಯಾಂಗಳ ಗೇಟ್ ಗಳನ್ನು ತೆರೆಯಲಾಗಿದೆ ಎಂದು ವರದಿ ತಿಳಿಸಿದೆ.

ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಸ್ಟ್ 26ರವರೆಗೆ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next