Advertisement

Kerala ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ವಿಧಿವಶ

08:37 AM Jul 18, 2023 | Kavyashree |

ಕೇರಳ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(79) ಜು.18ರ ಮಂಗಳವಾರ ಬೆಳಿಗ್ಗೆ ನಿಧನದಾದರು.

Advertisement

ಉಮ್ಮನ್‌ ಚಾಂಡಿ ನಿಧನದ ಬಗ್ಗೆ ಅವರ ಪುತ್ರ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ನಿಧನಕ್ಕೆ ಕೇರಳ ಸರ್ಕಾರ ಎರಡು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಮಂಗಳವಾರ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.

Advertisement

ಉಮ್ಮನ್‌ ಚಾಂಡಿ ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next