Advertisement

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

06:40 PM Aug 08, 2022 | Team Udayavani |

ನವದೆಹಲಿ: ಕೇರಳ ಲೋಕಾಯುಕ್ತ (ತಿದ್ದುಪಡಿ) ಸೇರಿದಂತೆ ಹಲವಾರು ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು “ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ’ ವ್ಯಕ್ತಪಡಿಸಿದ್ದಾರೆ.

Advertisement

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ನಾನು “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ-ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ’ ಎಂದು ರಾಜ್ಯಪಾಲ ಖಾನ್‌ ಹೇಳಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next