Advertisement

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

06:40 PM Aug 08, 2022 | Team Udayavani |

ನವದೆಹಲಿ: ಕೇರಳ ಲೋಕಾಯುಕ್ತ (ತಿದ್ದುಪಡಿ) ಸೇರಿದಂತೆ ಹಲವಾರು ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು “ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ’ ವ್ಯಕ್ತಪಡಿಸಿದ್ದಾರೆ.

Advertisement

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ನಾನು “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ-ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ’ ಎಂದು ರಾಜ್ಯಪಾಲ ಖಾನ್‌ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next