Advertisement

ಇಎಸ್‌ಝೆಡ್‌ ಸುತ್ತ ಜನವಸತಿ, ಕೃಷಿ, ಕಚೇರಿಗಳ ನಿಷೇಧ

11:01 PM Jul 27, 2022 | Team Udayavani |

ತಿರುವನಂತಪುರ: ಕೇರಳದಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳೆಂದು (ಇಎಸ್‌ಝೆಡ್‌) ಗುರುತಿಸಲಾಗಿರುವ ಪ್ರಾಂತ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಜನ ವಸತಿ, ಕೃಷಿ ಭೂಮಿಗಳು ಇರಬಾರದೆಂದು ನಿಷೇಧಿಸಿ ಕೇರಳ ಸರ್ಕಾರ ನಿರ್ಧರಿಸಿದೆ.

Advertisement

ಜೊತೆಗೆ, ಈ ವಲಯದಲ್ಲಿರುವ ಸರ್ಕಾರಿ ಕಚೇರಿಗಳು, ಅರೆ- ಸರ್ಕಾರಿ ಕಚೇರಿಗಳು ಹಾಗೂ ಇನ್ನಿತರ ಸಾರ್ವಜನಿಕ ಸಂಸ್ಥೆಗಳನ್ನು ಸ್ಥಳಾಂತರಗೊಳಿಸುವಂತೆ ನಿರ್ಧರಿಸಲಾಗಿದೆ.

ಕೇರಳ ಅರಣ್ಯ ಇಲಾಖೆ ಈ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿತ್ತು. ಬುಧವಾರ, ಮುಖ್ಯಮಂತ್ರಿ ಪಿಣರಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಕೇಂದ್ರ ಸೆಡ್ಡು ಹೊಡೆಯಲು ಕ್ರಮ?
ಇತ್ತೀಚೆಗೆ, ಕೇಂದ್ರ ಸರ್ಕಾರ, ಕೇರಳದ 23 ವನ್ಯಜೀವಿ ಸಂರಕ್ಷಣಾ ತಾಣ ಹಾಗೂ ರಾಷ್ಟ್ರೀಯ ಉದ್ಯಾನಗಳ ಸುತ್ತಲಿನ ಪ್ರಾಂತ್ಯಗಳಲ್ಲಿ ಜನವಸತಿಗೆ ಅವಕಾಶ ಕಲ್ಪಿಸಿ, ಕರಡು ನಿಯಮಗಳನ್ನು ಜಾರಿಗೊಳಿಸಿತ್ತು. ಆ ಹಿನ್ನೆಲೆಯಲ್ಲಿ, ಕೇಂದ್ರಕ್ಕೆ ಸೆಡ್ಡು ಹೊಡೆಯಲು ಕೇರಳ ಸರ್ಕಾರ, ಇಎಸ್‌ಝೆಡ್‌ ಸುತ್ತ ಜನ ವಸತಿ, ಕೃಷಿಯನ್ನು ನಿಷೇಧಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಜೊತೆಗೆ, ಅರಣ್ಯ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೂ ಕಳುಹಿಸಲಾಗಿದೆ ಎನ್ನಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next