Advertisement

ಶಬರಿಮಲೆ ಭಕ್ತರ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್‌ ಸಲಹೆ

12:47 AM Dec 12, 2022 | Team Udayavani |

ಕೊಚ್ಚಿ: ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ದಿನೇ ದಿನೆ ಭಕ್ತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಯಾತ್ರಾರ್ಥಿಗಳಿಗೆ ಸುಗುಮ ದರ್ಶನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜನಸಂದಣಿ ನಿಯಂತ್ರಣಕ್ಕೆ ಹಾಗೂ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್‌ ರವಿವಾರ ದೇಗುಲದ ಆಡಳಿತಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.

Advertisement

ನ. 17ರಿಂದ ಆರಂಭವಾದ ಮಂಡಲ ಮಕರವಿಳಕ್ಕು ಯಾತ್ರೆಗೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸು ತ್ತಿದ್ದಾರೆ. ಶನಿವಾರ ಒಂದೇ ದಿನ ಬರೋಬ್ಬರಿ 90,000ಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದರು. ಜನಸಂದಣಿ ನಿಯಂತ್ರಣ ಸಮ­ಯದಲ್ಲಿ ಕೆಲವು ಪೊಲೀಸರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದವು.

ವಿಚಾರಣೆ ವೇಳೆ ಈ ಮಾಹಿತಿ ಪಡೆದ ಕೇರಳ ಹೈಕೋರ್ಟ್‌, ಜನಸಂದಣಿ ನಿರ್ವಹಣೆ ಯೋಜನೆ ರೂಪಿಸುವಂತೆ ಜಿಲ್ಲಾ ಆಡಳಿತಕ್ಕೆ ಸೂಚಿಸಿದೆ. ಅಲ್ಲದೇ ಈಗ ದಿನಕ್ಕೆ 18 ಗಂಟೆ ದೇವರ ದರ್ಶನಕ್ಕೆ ಅವಕಾಶವಿದೆ. ಹೆಚ್ಚುವರಿಯಾಗಿ 30 ನಿಮಿಷ ಅಥವಾ 1 ಗಂಟೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವಂತೆ ಹೇಳಿದೆ.

 

Advertisement

Udayavani is now on Telegram. Click here to join our channel and stay updated with the latest news.

Next