Advertisement

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

01:00 AM May 17, 2024 | Team Udayavani |

ತಿರುವನಂತಪುರ: ಮೇ 31ಕ್ಕೆ ಮುಂಗಾರು ಮಳೆ ಕೇರಳ ಪ್ರವೇಶಿಸಲಿದೆ ಎಂದು ಈ ಹಿಂದೆ ಹವಾಮಾನ ಇಲಾಖೆ ಹೇಳಿತ್ತು. ಇದೀಗ ಮುಂಗಾರಿಗೂ ಮೊದಲು ಮೂರ್ನಾಲ್ಕು ದಿನ ಭಾರೀ ಮಳೆ ಸುರಿ ಯಲಿದೆ ಎಂದು ಹೇಳಿದ್ದು, ಮೇ 18ರಿಂದ 20ರ ವರೆಗೆ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಪಾಲಕ್ಕಾಡ್‌ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಮೇ 18ರಂದು, ಪತ್ತನಂತಿಟ್ಟ, ಆಲಪ್ಪುಳ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಮೇ 19ರಂದು ಹಾಗೂ 7 ಜಿಲ್ಲೆಗಳಿಗೆ ಮೇ 20ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 20ರಂದು ರಾಜ್ಯದಲ್ಲಿ ಭಾರೀ ಸಿಡಿಲು, ಗುಡುಗಿನ ಮಳೆ ಬೀಳಲಿದೆ ಎಂದು ಹೇಳಿದೆ. ಮಹಾರಾಷ್ಟ್ರದ ಪಾಲಾ^ಟ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next