Advertisement

ಅನಿವಾಸಿಗರ ಕರೆತರುವುದು ಅಸಾಧ್ಯ: ಕೇಂದ್ರ ಸರಕಾರ

01:07 PM Apr 18, 2020 | Hari Prasad |

ಎರ್ನಾಕುಳಂ: ಸದ್ಯದ ಪರಿಸ್ಥಿತಿಯಲ್ಲಿ ಅನಿವಾಸಿ ಭಾರತೀಯರನ್ನು (ಎನ್‌ಆರ್‌ಐ) ದೇಶಕ್ಕೆ ಕರೆತರಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರಕಾರ ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

Advertisement

ಯುಎಇ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಇರುವ ಕಾರಣ ಅಲ್ಲಿರುವ ಭಾರತೀಯ ವಲಸಿಗರನ್ನು ವಾಪಸ್‌ ಕರೆತರಲು ಆದೇಶಿಸುವಂತೆ ಕೋರಿ ದುಬೈ ಮೂಲದ ಕೇರಳ ಮುಸ್ಲಿಂ ಸಾಂಸ್ಕೃತಿಕ ಕೇಂದ್ರ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರಕಾರ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಲಾಕ್‌ಡೌನ್‌ ಅನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು ಮತ್ತು ಕೋವಿಡ್ ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಲು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಷ್ಟೇ ಪ್ರಸ್ತುತ ಆದ್ಯತೆಯ ವಿಷಯವಾಗಿದೆ ಎಂದು ಕೇಂದ್ರ ಹೈಕೋರ್ಟ್ ಗೆ ತಿಳಿಸಿದೆ.

ಕೇವಲ ಒಂದು ರಾಜ್ಯದ ಪರವಾಗಿ ಇಂತಹ ನಿಲುವುಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ಮುಂದೆ ಬೇರೆ ರಾಜ್ಯಗಳೂ ಇದೇ ರೀತಿ ಮಾಡಬಹುದು ಕೇಂದ್ರ ಅಭಿಪ್ರಾಯಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next