Advertisement

Kerala ಆಸ್ಪತ್ರೆ ತ್ಯಾಜ್ಯ ಕರ್ನಾಟಕಕ್ಕೆ: ಲಾರಿ ತಡೆದ ಸಾರ್ವಜನಿಕರು; ಠಾಣೆಗೆ ಹಸ್ತಾಂತರ

12:07 AM Aug 17, 2023 | Team Udayavani |

ವಿಟ್ಲ: ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿರುವ ದಂಧೆಯನ್ನು ಕಲ್ಲಡ್ಕ ಕಾಂಞಂಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಬುಧವಾರ ಪತ್ತೆ ಹಚ್ಚಿದ್ದಾರೆ.

Advertisement

ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್‌ ವಿಟ್ಲ ಠಾಣೆಗೆ ದೂರು ನೀಡಿದರು.

ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿದ್ದಾರೆನ್ನಲಾಗಿದೆ. ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next