Advertisement

ಕಿಡ್ನಿ ರೋಗಿಗಾಗಿ ಬಂಗಾರದ ಬಳೆ ಬಿಚ್ಚಿಕೊಟ್ಟ ಕೇರಳ ಸಚಿವೆ

07:53 PM Jul 11, 2022 | Team Udayavani |

ತ್ರಿಶೂರು: ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್‌. ಬಿಂದು ಅತ್ಯಂತ ಉದಾರ ನಡೆಯೊಂದರ ಮೂಲಕ ಮೇಲ್ಪಂಕ್ತಿಯೊಂದನ್ನು ಹಾಕಿಕೊಟ್ಟಿದ್ದಾರೆ.

Advertisement

ಜೀವಂತ ಉಳಿಯಬೇಕಾದರೆ ಕಿಡ್ನಿ ಮರುಜೋಡಣೆ ಮಾಡಿಸಿಕೊಳ್ಳಲೇಬೇಕಾದ ಸ್ಥಿತಿಯಲ್ಲಿದ್ದ ವ್ಯಕ್ತಿಯ ದುರ್ದೆಸೆಯನ್ನು ಗಮನಿಸಿದ ಅವರು; ತಮ್ಮ ಒಂದು ಬಂಗಾರದ ಬಳೆಯನ್ನೇ ಬಿಚ್ಚಿಕೊಟ್ಟಿದ್ದಾರೆ.

ಇದನ್ನೇ ವ್ಯಕ್ತಿಯ ನೆರವಿಗೆ ಮೊದಲ ದೇಣಿಗೆಯಾಗಿ ಸ್ವೀಕರಿಸಬೇಕೆಂದು ಕೇಳಿಕೊಂಡಿದ್ದಾರೆ. ಇದು ಭಾರೀ ಜನಮೆಚ್ಚುಗೆ ಪಡೆದಿದೆ.

ಈ ಘಟನೆ ನಡೆದಿದ್ದು ತ್ರಿಶೂರಿನ ಇರಿಂಜಾಲಕುಡದಲ್ಲಿ ಪ್ರದೇಶದಲ್ಲಿ. ಅಲ್ಲಿನ ವೈದ್ಯಕೀಯ ನೆರವು ಸಮಿತಿ ಕಿಡ್ನಿ ಮರುಜೋಡಣೆಗಾಗಿ ಒಂದು ಸಭೆ ನಡೆಸಿತ್ತು. ಅದರಲ್ಲಿ ಬಿಂದು ಅವರು ಪಾಲ್ಗೊಂಡಿದ್ದರು.

ಈ ವೇಳೆ 27 ವರ್ಷದ ವಿವೇಕ್‌ ಪ್ರಭಾಕರ್‌ ಅವರ ದುಸ್ಥಿತಿಯನ್ನು ಗಮನಿಸಿದ್ದಾರೆ. ಕೂಡಲೇ ಅವರು ತಮ್ಮ ಬಳೆಯನ್ನು ಬಿಚ್ಚಿ ನೀಡಿದ್ದಾರೆ. ಇದು ಬರೀ ಕೇರಳಕ್ಕೆ ಮಾತ್ರವಲ್ಲ, ದೇಶದ ಇತರೆ ಭಾಗದ ಜನತೆಗೂ ಮಾದರಿಯಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next