Advertisement

ಕೇರಳ: ಕಂದಕಕ್ಕೆ ಉರುಳಿ ಬಿದ್ದ ಕೆಎಸ್ ಆರ್ ಟಿಸಿ ಬಸ್; ಓರ್ವ ಸಾವು, 58 ಮಂದಿಗೆ ಗಾಯ

05:40 PM Sep 12, 2022 | Team Udayavani |

ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಓರ್ವ ಪ್ರಯಾಣಿಕರು ಸಾವನ್ನಪ್ಪಿದ್ದು, 58 ಮಂದಿ ಗಾಯಗೊಂಡ ಘಟನೆ ಸೋಮವಾರ (ಸೆ.12) ನಡೆದಿದೆ.

Advertisement

ಮೃತರನ್ನು ಸಂಜೀವನ್ (33) ಎಂದು ಗುರುತಿಸಲಾಗಿದೆ. ಇನ್ನೊಬ್ಬ ವ್ಯಕ್ತಿಯ ಸ್ಥಿತಿಯೂ ಚಿಂತಾಜನಕವಾಗಿದೆ. ಎಲ್ಲಾ ಗಾಯಾಳುಗಳನ್ನು ಎರ್ನಾಕುಲಂನ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಗುಡ್ಡಗಾಡು ಜಿಲ್ಲೆಯ ಚೀಯಪ್ಪಾರ ಮತ್ತು ನೆರಿಯಮಂಗಲಂ ನಡುವಿನ ಸ್ಥಳದಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರ್ನಾಕುಲಂನಿಂದ ಮುನ್ನಾರ್‌ಗೆ ತೆರಳುತ್ತಿದ್ದ ಬಸ್ ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುತ್ತಿದ್ದಾಗ ಬಸ್ಸಿನ ಒಂದು ಟೈರ್ ಒಡೆದ ಪರಿಣಾಮ ಬಸ್ ಸುಮಾರು 14-15 ಅಡಿಯ ಬೆಟ್ಟದ ಕೆಳಗೆ ಬಿದ್ದಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಬಸ್ಸಿನಲ್ಲಿ 60 ಮಂದಿ ಇದ್ದರು ಎಂದು ಬಸ್ ಕಂಡಕ್ಟರ್ ಸುಭಾಷ್ ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ, ಪೊಲೀಸ್ ರು,ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next