Advertisement

Kerala;ಪ್ರಧಾನಿ ಮೋದಿ ಅವರಿಗೆ ಬೆದರಿಕೆ ಪತ್ರ: ಆರೋಪಿ ಬಂಧನ

04:07 PM Apr 23, 2023 | Team Udayavani |

ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿಯನ್ನು ಕೇರಳ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಎಪ್ರಿಲ್ 24 ಮತ್ತು 25 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ.

Advertisement

ಬಂಧಿತ ಕೊಚ್ಚಿ ನಿವಾಸಿ ಕ್ಸೇವಿಯರ್ ಎಂಬಾತನಾಗಿದ್ದು, ವ್ಯಾಪಾರಿಯಾಗಿದ್ದು ಬೇರೊಬ್ಬ ವ್ಯಕ್ತಿಯ ಹೆಸರಿನಲ್ಲಿ ಬೆದರಿಕೆ ಪತ್ರ ಬರೆದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

“ನಾವು ವಿಷಯವನ್ನು ವೈಜ್ಞಾನಿಕ ರೀತಿಯಲ್ಲಿ ತನಿಖೆ ಮಾಡಿದ ನಂತರ ವ್ಯಕ್ತಿಯನ್ನು ಬಂಧಿಸಿದ್ದೇವೆ. ಇದು ವೈಯಕ್ತಿಕ ದ್ವೇಷದ ಭಾಗವಾಗಿತ್ತು. ಪತ್ರದಲ್ಲಿ ಉಲ್ಲೇಖಿಸಿರುವ ವ್ಯಕ್ತಿಯನ್ನು ಬಂಧಿಸಬೇಕೆಂದು ಅವರು ಬಯಸಿದ್ದರು ಎಂದು ನಗರ ಪೊಲೀಸ್ ಆಯುಕ್ತ ಕೆ ಸೇತು ರಾಮನ್ ಪಿಟಿಐಗೆ ತಿಳಿಸಿದ್ದಾರೆ.

ಕೊಚ್ಚಿ ನಿವಾಸಿ ಎನ್‌ಜೆ ಜಾನಿ ಎಂಬುವವರ ಹೆಸರಿನಲ್ಲಿ ಮಲಯಾಳಂ ಭಾಷೆಯಲ್ಲಿ ಬರೆದಿರುವ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರ ಕಚೇರಿಯಲ್ಲಿ ಸ್ವೀಕರಿಸಲಾಗಿದ್ದು, ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next