Advertisement

Kerebeate Movie: ಕೆರಿಬ್ಯಾಟಿ ಶುರುವಾತು…

04:16 PM Mar 03, 2024 | Team Udayavani |

“ಕೆರೆಬೇಟೆ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಇದರ ಬೆನ್ನಲ್ಲೇ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಅದು ಟೈಟಲ್‌ ಟ್ರ್ಯಾಕ್‌. ಈ ಹಾಡನ್ನು ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ.ವೈ ರಾಘವೇಂದ್ರ ರಿಲೀಸ್‌ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.

Advertisement

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್‌ ಟ್ರ್ಯಾಕ್‌ ರಿಲೀಸ್‌ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ಧೂರಿಯಾಗಿ ಬಿಡುಗಡೆಯಾಯಿತು.

“ಕೆರಿಬ್ಯಾಟಿ ಶುರುವಾತು…’ ಎನ್ನುವ ಈ ಟೈಟಲ್‌ ಟ್ರ್ಯಾಕ್‌ ಅನ್ನು ಪ್ರಮೋದ್‌ ಮರವಂತೆ ಬರೆದಿದ್ದಾರೆ. ಗಗನ್‌ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದು, ಕರಿಬಸವ ತಡಕಲ್‌ ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಟೈಟಲ್‌ ಟ್ರ್ಯಾಕ್‌ ರಿಲೀಸ್‌ ಮಾಡಿ ಮಾತನಾಡಿದ ಬಿ ವೈ ರಾಘವೇಂದ್ರ, “ಈ ಸಿನಿಮಾ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ. ಜೊತೆಗೆ ಮಲೆನಾಡಿನವರೇ ಸೇರಿ ಈ ಸಿನಿಮಾ ಮಾಡಿದ್ದಾರೆ. ಮಲೆನಾಡಿನ ಸೌಂದರ್ಯವನ್ನು ತುಂಬಾ ಸುಂದರವಾಗಿ ತೋರಿಸಲಾಗಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಇನ್ನು ಆರಗ ಜ್ಞಾನೇಂದ್ರ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಸಂಸ್ಕೃತಿಗಳು ಕಣ್ಮರೆಯಾಗಿವೆ. ಅನೇಕ ಪದ್ಧತಿಗಳು ಮರೆಯಾಗಿವೆ. ಇದೀಗ ಕೆರೆಬೇಟೆ ಸಂಸ್ಕೃತಿಯ ಬಗ್ಗೆ ಸಿನಿಮಾ ಮಾಡಿರುವುದು ತುಂಬಾ ಖುಷಿ ಆಗುತ್ತೆ. ಟ್ರೇಲರ್‌ ಮತ್ತು ಸಾಂಗ್‌ ಅದ್ಭುತವಾಗಿ ಮೂಡಿ ಬಂದಿದೆ.

Advertisement

ನಾಯಕ ನಟ, ನಿರ್ದೇಶಕ ನಿರ್ಮಾಪಕ ಸೇರಿದಂತೆ ಎಲ್ಲರೂ ಮಲೆನಾಡಿನವರೇ ಎನ್ನುವುದು ಖುಷಿಯ ವಿಚಾರ. ಸಿನಿಮಾ ಎಲ್ಲಾ ಕಡೆ ಹೌಸ್‌ ಫ‌ುಲ್‌ ಪ್ರದರ್ಶನ ಕಾಣಲಿ’ ಎಂದು ಹೇಳಿದರು.

ಚಿತ್ರ ಮಾರ್ಚ್‌ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ. ಗೌರಿ ಶಂಕರ್‌ ಈ ಸಿನಿಮಾದ ಹೀರೋ. ರಾಜಗುರು ಮೊದಲ ಬಾರಿಗೆ “ಕೆರೆಬೇಟೆ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

“ಕೆರೆಬೇಟೆ’ಯಲ್ಲಿ ಗೌರಿಶಂಕರ್‌ಗೆ ಬಿಂದು ಶಿವರಾಮ್‌ ನಾಯಕಿಯಾಗಿದ್ದು, ಗೋಪಾಲ ದೇಶಪಾಂಡೆ, ಹರಿಣಿ, ಸಂಪತ್‌ ಕುಮಾರ್‌, ರಘು ರಾಜನಂದ, ರಾಮದಾಸ್‌, ರಾಕೇಶ್‌ ಪೂಜಾರಿ, ವರ್ಧನ್‌ ತೀರ್ಥಹಳ್ಳಿ ಮತ್ತು ಮಲೆನಾಡಿನ ಅನೇಕ ಕಲಾವಿರು ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next