Advertisement

Kerebete Movie: ಕೆರೆಬೇಟೆ ಗೆಲುವು ನನಗೆ ಅನಿವಾರ್ಯ

12:36 PM Mar 13, 2024 | Team Udayavani |

ಕೆರೆಬೇಟೆ- ಕೆಲವು ದಿನಗಳಿಂದ ಸ್ಯಾಂಡಲ್‌ ವುಡ್‌ನ‌ಲ್ಲಿ ಕೇಳಿಬರುತ್ತಿರುವ ಹೆಸರು. ಮಲೆನಾಡಿನ ಹಿನ್ನೆಲೆಯಲ್ಲಿ ಮೂಡಿಬಂದಿರುವ ಈ ಸಿನಿಮಾ ಮಾ.15ರಂದು ತೆರೆಕಾಣುತ್ತಿದೆ. ಗೌರಿ ಶಂಕರ್‌ ನಾಯಕರಾಗಿರುವ ಈ ಚಿತ್ರವನ್ನು ರಾಜ್‌ಗುರು ನಿರ್ದೇಶನ ಮಾಡಿದ್ದಾರೆ.

Advertisement

ಇತ್ತೀಚೆಗೆ ಚಿತ್ರದ ಕಣ್ಣುಗಳೆ ಕಳೆದು ಹೋದಾಗ… ಹಾಡು ಬಿಡುಗಡೆಯಾಗಿದ್ದು, ಅಶ್ವಿ‌ನಿ ಪುನೀತ್‌ ರಾಜ್‌ ಕುಮಾರ್‌ ಹಾಡು ಬಿಡುಗಡೆ ಮಾಡಿ ಶುಭಕೋರಿದ್ದಾರೆ.

ಈಗಾಗಲೇ ಸಿನಿಮಾದ ಟೀಸರ್‌, ಟ್ರೇಲರ್‌ ಮತ್ತು ಹಾಡುಗಳು ರಿಲೀಸ್‌ ಆಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. “ಕಣ್ಣುಗಳೆ ಕಳೆದು ಹೋದಾಗ…’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡನ್ನು ಪ್ರಮೋದ್‌ ಮರವಂತೆ ಬರೆದಿದ್ದಾರೆ. ಸಿದ್ಧಾರ್ಥ ಬೆಳ್ಮಣ್ಣು ಧ್ವನಿ ನೀಡಿದ್ದು, ಗಗನ್‌ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ರಾಜ್‌ ಗುರು ಮಾತನಾಡಿ, “ದೊಡ್ಮನೆಗೂ ನನಗೂ ಒಂದು ಸಂಬಂಧವಿದೆ. ಅಪ್ಪು ಸರ್‌ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಮಣ್ಣಿನ ಕಥೆಗಳ ಬಗ್ಗೆ ತುಂಬಾ ಮಾತನಾಡುತ್ತಿದ್ದೆವು. ಈ ರೀತಿಯ ಸಿನಿಮಾ ಅವರಿಗೆ ತುಂಬಾ ಇಷ್ಟ’ ಎಂದರು.

ನಾಯಕಿ ಬಿಂಧು ಶಿವರಾಮ್‌ ಮಾತನಾಡಿ, “ಮಲೆನಾಡಿನ ಭಾಷೆ ನನಗೆ ತುಂಬಾ ಕಷ್ಟವಾಯಿತು. ಕೆರೆಬೇಟೆ ಗೆಲುವು ನನಗೆ ಅನಿವಾರ್ಯ ಇಡೀ ಸಿನಿಮಾ ತಂಡ ಮಲೆನಾಡಿನವರಾಗಿದ್ದರಿಂದ ಅದೇ ಭಾಷೆಯನ್ನು ಮಾತನಾಡುತ್ತಿದ್ದರು. ಹಾಗಾಗಿ ನನಗೂ ಅವರ ಜೊತೆ ಸೇರಿ ಮಲೆನಾಡಿನ ಭಾಷೆ ಮಾತನಾಡಲು ಸುಲಭವಾಯ್ತು. ಈ ಚಿತ್ರದಲ್ಲಿ ನನ್ನ ಪಾತ್ರ ತುಂಬಾ ಗಟ್ಟಿಯಾಗಿದೆ’ ಎಂದರು.

ನಾಯಕ ಗೌರಿಶಂಕರ್‌ಗೆ ಈ ಸಿನಿಮಾ ಮೇಲೆ ತುಂಬಾ ನಿರೀಕ್ಷೆ ಇದೆ. ಈ ಸಿನಿಮಾದ ಗೆಲುವು ಅವರಿಗೆ ಅನಿವಾರ್ಯ ಕೂಡಾ. “ಈ ಸಿನಿಮಾ ನನಗೆ ಗೆಲ್ಲಲೇ ಬೇಕಾಗಿದೆ. ಏಕೆಂದರೆ ನಾನು ತುಂಬಾ ಸೋಲನ್ನು ಕಂಡಿದ್ದೇನೆ. ಸೋತು ಮನೆಯಲ್ಲಿ ಕೂರುವುದು ತುಂಬಾ ಕಷ್ಟ. ಸಿನಿಮಾ ಸಹವಾಸವೇ ಬೇಡ ಅಂತ ಇದ್ದೆ. ನಿರ್ದೇಶಕರು ಈ ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಹಾಗಾಗಿ ಈ ಸಿನಿಮಾ ಒಪ್ಪಿಕೊಂಡೆ. ತುಂಬಾ ತಯಾರಿ ಮಾಡಿಕೊಂಡೇ ಬಂದಿದ್ದೇನೆ. ಗೆಲುವು ನನಗೆ ಅನಿವಾರ್ಯ ಆಗಿದೆ’ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next