Advertisement

ನಿಪಾ ಸೋಂಕು ದೃಢ: 311 ಮಂದಿ ಮೇಲೆ ನಿಗಾ

09:07 AM Jun 06, 2019 | mahesh |

ಕೊಚ್ಚಿ: ಕೇರಳದ 2 ಜಿಲ್ಲೆಗಳಿಗೆ ಮಾರಣಾಂತಿಕ ನಿಪಾ ಸೋಂಕು ವಕ್ಕರಿಸಿರುವುದು ದೃಢ ಪಟ್ಟಿದ್ದು, ರಾಜ್ಯಾದ್ಯಂತ ಆತಂಕ ಸೃಷ್ಟಿಯಾಗಿದೆ. ನಿಪಾ ಸೋಂಕಿನ ಲಕ್ಷಣಗಳಿದ್ದ 23 ವರ್ಷದ ಕಾಲೇಜು ವಿದ್ಯಾರ್ಥಿಗೆ ಅದೇ ಸೋಂಕು ತಗುಲಿ ರುವುದು ನಿಜ ಎಂದು ಪ್ರಯೋಗಾಲಯಗಳ ವರದಿಯಿಂದ ಮಂಗಳವಾರ ಸ್ಪಷ್ಟವಾಗಿದೆ.

Advertisement

ಇದೇ ವೇಳೆ, ಯುವಕನಿಗೆ ಆರಂಭದಲ್ಲಿ ಚಿಕಿತ್ಸೆ ನೀಡಿದ್ದ ಇಬ್ಬರು ನರ್ಸ್‌ಗಳಿಗೂ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, ಇವರಿಗೂ ಚಿಕಿತ್ಸೆ ಆರಂಭಿಸಲಾಗಿದೆ. ಎರ್ನಾಕುಳಂನ ಮತ್ತೂಬ್ಬ ಯುವಕನನ್ನೂ ಪ್ರತ್ಯೇಕ ವಾರ್ಡ್‌ಗೆ ವರ್ಗಾಯಿಸಲಾಗಿದೆ. ಅಲ್ಲದೆ, ಸೋಂಕು ತಗುಲಿದ ಯುವಕನ ಜತೆ ಸಂಪರ್ಕದಲ್ಲಿದ್ದ 311 ಮಂದಿಯ ಪಟ್ಟಿ ಸಿದ್ಧಪಡಿಸಲಾಗಿದ್ದು, ಅವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುವಕನು ಎರ್ನಾಕುಲಂ ಜಿಲ್ಲೆಯವನಾಗಿದ್ದು, ಇಡುಕ್ಕಿ ಜಿಲ್ಲೆಯ ತೋಡುಪುಳದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಹೀಗಾಗಿ ಈ ಎರಡು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಆರೋಗ್ಯ ಸ್ಥಿರ: 2 ದಿನಗಳ ಹಿಂದೆಯೇ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದ ವಿದ್ಯಾರ್ಥಿಯಲ್ಲಿ ನಿಪಾ ಲಕ್ಷಣ ಗೋಚರಿಸಿದ್ದವು. ಕೂಡಲೇ ಆತನ ರಕ್ತದ ಮಾದರಿಯನ್ನು ಪುಣೆಯಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿಗೆ ಹಾಗೂ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಮತ್ತು ಕೇರಳ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿಗೆ ಕಳುಹಿಸಲಾಗಿತ್ತು. ಇದೀಗ ಆತನಿಗೆ ನಿಪಾ ಸೋಂಕು ಇರುವುದು ವರದಿಯಲ್ಲಿ ದೃಢ ಪಟ್ಟಿದೆ. ಖಾಸಗಿ ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಸಚಿವೆ ಶೈಲಜಾ ತಿಳಿಸಿದ್ದಾರೆ.

ಕೇಂದ್ರದ ತಂಡ ರವಾನೆ
ನಿಪಾ ಸೋಂಕು ವಿಚಾರ ದೃಢವಾಗು ತ್ತಿದ್ದಂತೆ ಕೇಂದ್ರದ 6 ಮಂದಿ ತಜ್ಞರ ತಂಡವು ಕೇರಳಕ್ಕೆ ಧಾವಿಸಿದೆ. ಜತೆಗೆ, ರಾಜ್ಯಕ್ಕೆ ಅಗತ್ಯವಾದ ಎಲ್ಲ ನೆರವು ಒದಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ತಿಳಿಸಿದ್ದಾರೆ. ಈ ನಡುವೆ, ಮಂಗಳವಾರ ಮಾತನಾಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‌, “ಯಾರೂ ಆತಂಕಕ್ಕೆ ಒಳಗಾಗ ಬೇಡಿ. ನಾವು ಕೇಂದ್ರ ಆರೋಗ್ಯ ಸಚಿವಾಲ ಯದೊಂದಿಗೆ ನಿರಂತರ ಸಂಪರ್ಕದಲ್ಲಿ ದ್ದೇವೆ. ಎಲ್ಲ ಸವಾಲುಗಳನ್ನು ಎದುರಿಸಲೂ ಸನ್ನದ್ಧರಾಗಿದ್ದೇವೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next